ADVERTISEMENT

ಇಂದಿನಿಂದ ಬಿಸಿಯೂಟ ನೌಕರರ ಹೋರಾಟ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2022, 21:26 IST
Last Updated 15 ಆಗಸ್ಟ್ 2022, 21:26 IST

ಬೆಂಗಳೂರು: ಸುಪ್ರೀಂ ಕೋರ್ಟ್‌ ತೀರ್ಪಿನ ಪ್ರಕಾರ ಬಿಸಿಯೂಟ ನೌಕರರಿಗೆ ಗ್ರಾಚ್ಯುಟಿ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿ ಮಂಗಳವಾರದಿಂದ (ಆ.16) ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಮಾಡಲಾಗುವುದು ಎಂದು ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ತಿಳಿಸಿದೆ.

ರಾಜ್ಯದಲ್ಲಿ 6,500 ನೌಕರರಿಗೆ 60 ವರ್ಷ ವಯಸ್ಸಾಗಿದೆ ಎಂದು ನಿವೃತ್ತಿ ಸೌಲಭ್ಯ ಒದಗಿಸದೇ ವಜಾ ಮಾಡಿರುವುದು ಖಂಡನೀಯ. ಈ ಕೆಲಸವನ್ನೇ ಜೀವನಾಧಾರ ಎಂದು ನಂಬಿ ಬದುಕುತ್ತಿರುವ ಲಕ್ಷಾಂತರ ಕುಟುಂಬಗಳ ಮೇಲೆ ಬರೆ ಎಳೆದಂತಾಗಿದೆ.

ಬೇಡಿಕೆ ಈಡೇರಿಸುವವರಗೂ ಪ್ರತಿಭಟನೆ ಮಾಡಲಾಗುವುದುಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.