ಬೆಳಗಾವಿ: ರಾಜ್ಯದ ವಿವಿಧ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರವೇ 2,000 ಚಾಲಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಸಿದ್ದು ಸವದಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಚಾಲಕರಿಗೆ ಈವರೆಗೆ ತರಬೇತಿ ಅವಧಿಯಲ್ಲಿ ₹10 ಸಾವಿರ ನೀಡಲಾಗುತ್ತಿತ್ತು. ಆ ಮೊತ್ತವನ್ನು ₹20 ಸಾವಿರಕ್ಕೆ ಹೆಚ್ಚಿಸಲಾ
ಗುವುದು ಎಂದು ಅವರು ತಿಳಿಸಿದರು.
ಕೋವಿಡ್ ಸಂದರ್ಭದಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ಸಾರಿಗೆ ಸಂಸ್ಥೆಗಳ ಬಸ್ ಸಂಚಾರವನ್ನು ನಿಲ್ಲಿಸಲಾಗಿತ್ತು. ಹಲವು ಕಡೆಗಳಲ್ಲಿ ಪುನಃ ಸಂಚಾರ ಆರಂಭಿಸಲಾಗಿದೆ. ಅಲ್ಲದೆ, ಕೆಲವು ಕಡೆಗಳಲ್ಲಿ ರಸ್ತೆಗಳು ಸರಿ ಇಲ್ಲದ ಕಾರಣ ಬಸ್ಗಳು ಸಂಚರಿಸುತ್ತಿಲ್ಲ. ಚಾಲಕರು ಮತ್ತು ಕಂಡಕ್ಟರ್ಗಳ ಕೊರತೆಯೂ ಇದೆ ಎಂದು ಹೇಳಿದರು. ಸಚಿವರ ಈ ಉತ್ತರದ ಬಗ್ಗೆ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.