ಬೆಂಗಳೂರು: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರನ್ನು ದಿಢೀರ್ ಬದಲಿಸಿ, ಆ ಸ್ಥಾನಕ್ಕೆ ಕಂದಾಯ ಸಚಿವ ಕೆ. ಅಶೋಕ ಅವರನ್ನು ನೇಮಿಸಲಾಗಿದೆ.
ಹಳೆ ಮೈಸೂರು ಭಾಗದಲ್ಲಿ ಒಕ್ಕಲಿ ಗರ ಪ್ರಾಬಲ್ಯವಿದೆ. ಗೋಪಾಲಯ್ಯ ಜೆಡಿಎಸ್ಗೆ ದ್ರೋಹ ಬಗೆದು ಬಿಜೆಪಿ ಸೇರಿದ್ದಾರೆ ಎಂಬ ಕೋಪ ಈ ಭಾಗ ದಲ್ಲಿ ದಟ್ಟವಾಗಿದೆ. ಹೀಗಾಗಿ, ಅವರನ್ನೇ ಮುಂದುವರಿಸಿದರೆ ಚುನಾವಣೆಯಲ್ಲಿ ಬಿಜೆಪಿಗೆ ಮುಳುವಾಗಬಹುದು ಎಂಬ
ಕಾರಣಕ್ಕೆ ಮುಖ್ಯಮಂತ್ರಿ ಈ ಬದಲಾವಣೆ ಮಾಡಿದ್ದಾರೆ ಎಂದು ವಿಶ್ಲೇಷಿಸಲಾಗಿದೆ. ಈ ಹಿಂದೆ 2 ಬಾರಿ ಅಶೋಕ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.