ADVERTISEMENT

ಗ್ರಾಮ ಪಂಚಾಯಿತಿ ಚುನಾವಣೆ: ವಿಧಾನಮಂಡಲ ಅಧಿವೇಶನ ನಾಲ್ಕೇ ದಿನಕ್ಕೆ ಅಂತ್ಯ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2020, 9:47 IST
Last Updated 8 ಡಿಸೆಂಬರ್ 2020, 9:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ವಿಧಾನಸಭಾ ಅಧಿವೇಶನ ಗುರುವಾರ ( ಡಿ.10) ಅಂತ್ಯಗೊಳಿಸಲು ತೀರ್ಮಾನ ಮಾಡಿದ್ದೇವೆ’ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

ಸದನ ಕಲಾಪ ಸಮಿತಿ ಸಭೆಯ‌ ಬಳಿಕ‌ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆ ಕಾರಣ ಅಧಿವೇಶನ ಅವಧಿ ಮೊಟಕುಗೊಳಿಸಲು ನಿರ್ಧರಿಸಲಾಗಿದೆ ಎಂದರು.

ಒಂದು ದೇಶ ಒಂದು ಚುನಾವಣೆ ಕುರಿತ ಚರ್ಚೆ ಮುಂದಿನ ಅಧಿವೇಶನದಲ್ಲಿ ಚರ್ಚೆಗೆ ತೀರ್ಮಾನ ಮಾಡಲಾಗಿದೆ. ಗೋಹತ್ಯೆ ತಡೆ ಮಸೂದೆ ಮಂಡನೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಮಸೂದೆ ಮಂಡಿಸುತ್ತೇವೆ, ಯಾವುದೆಲ್ಲ ಮಸೂದೆಗಳು ಬರುತ್ತೆ ಅಂತ ನಾಳೆ ನಾಡಿದ್ದು ಗೊತ್ತಾಗಲಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.