ADVERTISEMENT

ತೌತೆ ಚಂಡಮಾರುತ | 22 ತಾಲ್ಲೂಕುಗಳಲ್ಲಿ ಹಾನಿ: ಕಂದಾಯ ಸಚಿವ ಆರ್‌. ಅಶೋಕ್‌

​ಪ್ರಜಾವಾಣಿ ವಾರ್ತೆ
Published 17 ಮೇ 2021, 14:11 IST
Last Updated 17 ಮೇ 2021, 14:11 IST

ಮಂಗಳೂರು: ತೌತೆ ಚಂಡಮಾರುತದಿಂದಾಗಿ ರಾಜ್ಯದ 22 ತಾಲ್ಲೂಕುಗಳ 121 ಗ್ರಾಮಗಳಲ್ಲಿ ಹಾನಿಯಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದರು.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಟ್ಟು 333 ಮನೆಗಳಿಗೆ ಹಾಗೂ 644 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. 6 ಜನರು ಮೃತಪಟ್ಟಿದ್ದಾರೆ. 290 ಜನರಿಗೆ ಕಾಳಜಿ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT