ADVERTISEMENT

ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿ; ರೈತರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ: ಸಚಿವ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 5:23 IST
Last Updated 5 ಅಕ್ಟೋಬರ್ 2021, 5:23 IST
   

ಬೆಂಗಳೂರು: 'ನಾಡಿದ ರೈತರು ಯಾವುದೇ ಆತಂಕಕ್ಕೆಒಳಗಾಗುವ ಅಗತ್ಯ ಇಲ್ಲ.‌ ರೈತರ ಬಿಲ್ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ' ಎಂದು ಸಕ್ಕರೆ ಸಚಿವ ಶಂಕರ್ ಪಾಟೀಲ ಮುನೇನಕೊಪ್ಪ ಹೇಳಿದರು.

ರೈತರು ಕಬ್ಬು ಬೆಳೆಗಾರರಿಗೆ ಬಾಕಿ ಮೊತ್ತ ಪಾವತಿ ವಿಚಾರ ಕುರಿತು ವಿಕಾಸಸೌಧದಲ್ಲಿ ಸುದ್ದಿಗೋಷ್ಟಿಯಲ್ಲಿ ಮಂಗಳವಾರ ಬೆಳಿಗ್ಗೆ ಮಾತನಾಡಿದ ಅವರು, 'ರೈತರ ಹಣ ಬಾಕಿ ಪಾವತಿ ಬಗ್ಗೆ ಬೆಳಗಾವಿಯಲ್ಲಿ ಹಾಗೂ ಬೆಂಗಳೂರಿನಲ್ಲಿಸಭೆ ನಡೆಸಿದ್ದೇನೆ' ಎಂದರು‌.

'ಮಾಲೀಕರು ಹಾಗೂ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೆ. ರೈತರಿಗೆ ಬಾಕಿ ಇರುವ ಹಣ ನೀಡಲು ಸೂಚನೆ ನೀಡಲಾಗಿತ್ತು. ಈ ವರ್ಷ 42.17 ಕೋಟಿ ಮೊತ್ತ ಬಾಕಿ ಇತ್ತು . ಕಾರ್ಖಾನೆಗಳು ಮೂರು ದಿನಗಳ ಒಳಗಾಗಿ 26.26 ಕೋಟಿ ಜಮೆ ಮಾಡಲಾಗಿದೆ ಇನ್ನು ಪಾವತಿ ಆಗದ 15.91 ಕೋಟಿ ಬಾಕಿ ಇದೆ' ಎಂದರು.

ADVERTISEMENT

'ಬಸವೇಶ್ವರ ಶುಗರ್ಸ್ 9.50 ಕೋಟಿ, ಕೋರ್ ಗ್ರೀನ್ ಶುಗರ್ಸ್ ಕಾರ್ಖಾನೆಯಿಂದ 6.41 ಬಾಕಿ ಇದೆ. ಈ ಕಾರ್ಖಾನೆಗಳಿಗೆ ವಸೂಲಾತಿಗೆ ನೋಟಿಸ್ ನೀಡಲಾಗಿದೆ ' ಎಂದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.