ADVERTISEMENT

ವಾರದೊಳಗೆ ಶಿಕ್ಷಕರ ಬಡ್ತಿ ಮುಗಿಸಲು ಸಚಿವರ ಸೂಚನೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2020, 18:29 IST
Last Updated 8 ಸೆಪ್ಟೆಂಬರ್ 2020, 18:29 IST

ಬೆಂಗಳೂರು: ‘ಪ್ರಾಥಮಿಕ ಶಾಲಾ ಶಿಕ್ಷಕ ವೃಂದದಿಂದ ಪ್ರೌಢಶಾಲಾ ಶಿಕ್ಷಕ ಹುದ್ದೆಗೆ ಬಡ್ತಿ ಪ್ರಕ್ರಿಯೆಯನ್ನು ಒಂದು ವಾರದೊಳಗೆ ಮುಗಿಸಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್ ಸೂಚಿಸಿದ್ದಾರೆ.

‘ಹಲವು ಜಿಲ್ಲೆಗಳಲ್ಲಿ ಈಗಾಗಲೇ ಪದೋನ್ನತಿ ನೀಡಲಾಗಿದೆ. ಆದರೆ, ಕೆಲವು ಜಿಲ್ಲೆಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಈ ಮಧ್ಯೆ, ಬಡ್ತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ. ಇದರಿಂದ ತೊಂದರೆಗೆ ಒಳಗಾದ ಈ ಜಿಲ್ಲೆಗಳ ಶಿಕ್ಷಕರ ಮನವಿಯನ್ನು ಪರಿಗಣಿಸಿ, ತಡೆಹಿಡಿದಿರುವ ಬಡ್ತಿ ಪ್ರಕ್ರಿಯೆಗೆ ಅನುಮತಿ ನೀಡಲಾಗಿದೆ’ ಎಂದೂ ಸಚಿವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT