ADVERTISEMENT

ನನ್ನ ಸಚಿವ ಸಂಪುಟದಿಂದ ಕೈ ಬಿಡಲಾಗುತ್ತದೆ ಎಂಬುದು ಉಹಾಪೋಹ: ಸಚಿವೆ ಶಶಿಕಲಾ ಜೊಲ್ಲೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2020, 12:03 IST
Last Updated 1 ಜೂನ್ 2020, 12:03 IST

ಹುಬ್ಬಳ್ಳಿ: ನನ್ನನ್ನು ಸಚಿವ ಸಂಪುಟದಿಂದ ಕೈ ಬಿಡಲಾಗುತ್ತದೆ ಎಂಬುದು ಉಹಾಪೋಹ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ‌ ಸಂಘಟನೆಯ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ಎರಡನೇ ಬಾರಿಗೆ ಶಾಸಕಿಯಾಗಿದ್ದೇನೆ. ಹಾಗಾಗಿ, ಸಂಪುಟದಿಂದ ಕೈ ಬಿಡುವ ಪ್ರಶ್ನೆ ಉದ್ಭವಿಸುದಿಲ್ಲ ಎಂದರು.

ಬೆಳಗಾವಿಯಲ್ಲಿ ಪಕ್ಷದ ಶಾಸಕರ ಬಂಡಾಯದ ಬಗ್ಗೆ ಮಾತನಾಡುವುದಿಲ್ಲ. ಅದನ್ನು ಪಕ್ಷದ ವರಿಷ್ಠರು ನೋಡಿಕೊಳ್ಳುತ್ತಾರೆ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.