ADVERTISEMENT

ನೆರವು | ಡಿಸಿಎಂ ಕಾರಜೋಳಗೆ ಧನ್ಯವಾದ ಹೇಳಿದ ಮಿಜೋರಾಂ ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2020, 7:38 IST
Last Updated 18 ಏಪ್ರಿಲ್ 2020, 7:38 IST
ಬೆಂಗಳೂರಿನಲ್ಲಿ ಮಿಜೋರಾಂ ವಿದ್ಯಾರ್ಥಿಗಳಿಗೆ ಮಾಸ್ಕ್‌ ವಿತರಿಸುತ್ತಿರುವ ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ
ಬೆಂಗಳೂರಿನಲ್ಲಿ ಮಿಜೋರಾಂ ವಿದ್ಯಾರ್ಥಿಗಳಿಗೆ ಮಾಸ್ಕ್‌ ವಿತರಿಸುತ್ತಿರುವ ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ   

ಬೆಂಗಳೂರು:ತಮ್ಮ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಆಶ್ರಯ ನೀಡಿರುವುದಕ್ಕೆ ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರಿಗೆ ಮಿಜೋರಾಂ ಮುಖ್ಯಮಂತ್ರಿಜೋರಾಮ್‌ಥಾಂಗಾನಿ ಅವರು ಧನ್ಯವಾದ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಜೋರಾಮ್‌ಥಾಂಗಾನಿ, ‘ಲಾಕ್‌ಡೌನ್‌ ಹಿನ್ನೆಲೆ ಬೆಂಗಳೂರಿನಲ್ಲಿ ಸಂತ್ರಸ್ತರಾದ ಮಿಜೋರಾಂ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಶ್ರಯ ನೀಡಿ, ಆರೈಕೆ ಮಾಡಲು ನೇತೃತ್ವ ವಹಿಸಿದ ಗೋವಿಂದ ಕಾರಜೋಳ ಅವರಿಗೆ ಹೃದಯಪೂರ್ವಕ ಧನ್ಯವಾದಗಳು. ನಿಮ್ಮ ಸಹಾಯಕ್ಕೆ ಮಿಜೋರಾಂನ ಜನತೆ ಸದಾ ಕೃತಜ್ಞರಾಗಿರುತ್ತಾರೆ' ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT