ಚಿಕ್ಕಮಗಳೂರು: ಜಿಲ್ಲೆಯ ಕಡೂರು ಕ್ಷೇತ್ರದ ಶಾಸಕ ಬೆಳ್ಳಿ ಪ್ರಕಾಶ್ ಅವರಿಗೆ ಶನಿವಾರ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಕಡೂರಿನಲ್ಲಿ ಶನಿವಾರ ಬೆಳಿಗ್ಗೆ ಗಂಟಲು, ಮೂಗಿನ ದ್ರವ ಮಾದರಿ ಪರೀಕ್ಷೆ ಮಾಡಿಸಿದ್ದರು.
‘ಲಕ್ಷಣ ರಹಿತ ಸೋಂಕಿತನಾಗಿದ್ದು, ಬೆಂಗಳೂರಿನಲ್ಲಿ ಸುಗುಣ ಆಸ್ಪತ್ರೆಗೆ ದಾಖಲಾಗಿದ್ದೇನೆ. ಚಿಕಿತ್ಸೆ ಶುರು ಮಾಡಿದ್ದಾರೆ’ ಎಂದು ಬೆಳ್ಳಿ ಪ್ರಕಾಶ್ ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.