ADVERTISEMENT

ಸತೀಶ ಜೊತೆ ಮಹೇಶ ಕುಮಠಳ್ಳಿ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2019, 18:08 IST
Last Updated 16 ಫೆಬ್ರುವರಿ 2019, 18:08 IST

ಬೆಳಗಾವಿ: ಕಾಂಗ್ರೆಸ್‌ ಮುಖಂಡರೊಂದಿಗೆ ಮುನಿಸಿಕೊಂಡು, ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ಗುರುತಿಸಿಕೊಂಡಿದ್ದ ಅಥಣಿ ಶಾಸಕ ಮಹೇಶ ಕುಮಠಳ್ಳಿ, ಶನಿವಾರ ಸಚಿವ ಸತೀಶ ಜಾರಕಿಹೊಳಿ ಜೊತೆ ಕಾಣಿಸಿಕೊಂಡರು.

ನಗರದಲ್ಲಿ ರೈತರಿಗೆ ಕಬ್ಬು ಕಟಾವು ಯಂತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಸಚಿವರೊಂದಿಗೆ ಕಾಣಿಸಿಕೊಂಡರು. ಇದಕ್ಕಿಂತ ಮುಂಚೆ ಹಲವು ದಿನಗಳವರೆಗೆ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಅತೃಪ್ತ ಶಾಸಕ ರಮೇಶ ಜೊತೆ ಮುಂಬೈಗೆ ಹೋಗಿದ್ದರು ಎಂದು ಹೇಳಲಾಗುತ್ತಿತ್ತು.

ಮಹೇಶ ಮರಳಿ ಬಂದ ನಂತರ ಸತೀಶ ಜಾರಕಿಹೊಳಿ ಅವರ ಜೊತೆ ಮಾತುಕತೆ ನಡೆಸಿದರು. ಅವರೊಟ್ಟಿಗೆ ಕಾರ್ಯಕ್ರಮದಲ್ಲೂ ಭಾಗಿಯಾದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.