ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಪ್ರಕರಣಗಳು ಜಾಸ್ತಿಯಾಗುತ್ತಲೇ ಇದ್ದು, ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಅನರ್ಹ ಶಾಸಕ ಮುನಿರತ್ನ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಕುರಿತು ಅವರೇ ಟ್ವೀಟ್ ಮಾಡಿದ್ದು, ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ನನ್ನ ಎಲ್ಲಾ ಮತದಾರ ದೇವರುಗಳಿಗೆ ವಂದನೆಗಳು. 57 ವರ್ಷ ವಯಸ್ಸಿನವನಾದ ನಾನು ಇಂದು ಕೊವೀಡ್ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಬಂದಿದೆ. ಕ್ಷೇಮವಾಗಿ ಬಂದರೆ ನಿಮ್ಮ ಸೇವೆ. ಇಲ್ಲದಿದ್ದರೆ ಕ್ಷಮಿಸಿಬಿಡಿ. ಇಂತಿ ನಿಮ್ಮ ಸೇವಕ ಮುನಿರತ್ನ ಎಂದು ಬರೆದುಕೊಂಡಿದ್ದಾರೆ.
ಇನ್ನು ಸಂಜೆಯಷ್ಟೇ ಟ್ವೀಟ್ ಮಾಡಿದ್ದ ಆರೋಗ್ಯ ಸಚಿವ ಶ್ರೀರಾಮುಲು ಅವರು ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಕೋವಿಡ್–19 ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದೆ ಎಂದು ತಿಳಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.