ತುಮಕೂರು: ‘ದೇವೇಗೌಡರಿಗೆ 28 ಜನ ಮೊಮ್ಮಕ್ಕಳಿದ್ದಿದ್ದರೆ ಎಲ್ಲ ಲೋಕಸಭಾ ಕ್ಷೇತ್ರಕ್ಕೂ ಅವರನ್ನೇ ಅಭ್ಯರ್ಥಿಗಳನ್ನಾಗಿಸುತ್ತಿದ್ದರು. 224 ಮರಿಮೊಮ್ಮಕ್ಕಳಿದ್ದಿದ್ದರೆ ಎಲ್ಲರನ್ನೂ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನಾಗಿ ಮಾಡುತ್ತಿದ್ದರು. ಈ ಚುನಾವಣೆಯಲ್ಲಿ ಮೊಮ್ಮಕ್ಕಳನ್ನು ತಂದಿರುವುದು ಸರಿಯಲ್ಲ’ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಟೀಕಿಸಿದ್ದಾರೆ.
‘ಒಂದೇ ಮನೆಯಲ್ಲಿ ಮಕ್ಕಳು, ಮೊಮ್ಮಕ್ಕಳು ಸ್ಪರ್ಧೆ ಮಾಡ್ತಾರೆ ಎಂದರೆ ಹೇಗೆ? ಇವರದು ನಾಟಕ ಕಂಪನಿ ಅಂಥಾ ಯತ್ನಾಳ್ ಅವರು ಹೇಳಿರುವುದು ಸರಿ ಇದೆ’ ಕುಟುಕಿದ್ದಾರೆ.
ಜೆಡಿಎಸ್ ಅಭ್ಯರ್ಥಿಯಾಗಿ ದೇವೇಗೌಡರು ತುಮಕೂರಿನಿಂದ ಕಣಕ್ಕಿಳಿದರೆ ನಾನು ಟಿಕೆಟ್ಗೆ ಅರ್ಜಿ ಹಾಕುತ್ತೇನೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.