ADVERTISEMENT

ರೇವಣ್ಣ ವಿರುದ್ಧ ನನಗೂ ಅಸಮಾಧಾನ: ಶಾಸಕ ಶಿವಾನಂದ ಪಾಟೀಲ

​ಪ್ರಜಾವಾಣಿ ವಾರ್ತೆ
Published 28 ಜುಲೈ 2019, 19:56 IST
Last Updated 28 ಜುಲೈ 2019, 19:56 IST
   

ವಿಜಯಪುರ: ‘ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಆರೋಗ್ಯ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡಿದ್ದರು. ಹೀಗಾಗಿ ನನಗೂ ಅವರ ಮೇಲೆ ಅಸಮಾಧಾನವಿದೆ’ ಎಂದು ಶಾಸಕ ಶಿವಾನಂದ ಪಾಟೀಲ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೈತ್ರಿ ಸರ್ಕಾರದಲ್ಲಿ ಸಹಕಾರ ಇಲ್ಲದ್ದರಿಂದ ಇಂತಹ ಸ್ಥಿತಿ ನಿರ್ಮಾಣವಾಯಿತು. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸರಿಯಾಗಿ ಸಭೆಗಳನ್ನು ನಡೆಸಲಿಲ್ಲ. ನಮ್ಮ ನಾಯಕರಿಗೆ ಈ ಬಗ್ಗೆ ಮನವರಿಕೆ ಮಾಡಿದರೂ ಪ್ರಯೋಜನವಾಗಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ಕೆಎಂಎಫ್ ಅಧ್ಯಕ್ಷ ಸ್ಥಾನ ನಮ್ಮ ಪಕ್ಷಕ್ಕೆ ನೀಡಬೇಕು ಎಂದು ಹಿರಿಯ ನಾಯಕರು ಒಪ್ಪಂದ ಮಾಡಿಕೊಂಡಿದ್ದರು. ರೇವಣ್ಣ ಅವರು ಕಾಂಗ್ರೆಸ್‌ನ ನಾಲ್ವರು ಸದಸ್ಯರನ್ನು ಕರೆದೊಯ್ದಿದ್ದಾರೆಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಒಂದೊಮ್ಮೆ ಹಾಗೆ ಮಾಡಿದ್ದರೆ ನಿಜಕ್ಕೂ ಒಳ್ಳೆಯದಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.