ಬಾಗಲಕೋಟೆ: ಸಚಿವ ಸಂಪುಟ ವಿಸ್ತರಣೆ ನಂತರ ತೇರದಾಳ ಶಾಸಕ ಸಿದ್ದು ಸವದಿ ಫೇಸ್ ಬುಕ್ ನಲ್ಲಿ ನೋವು ತೋಡಿಕೊಂಡಿದ್ದಾರೆ.
ಸಿದ್ದು ಸವದಿ ಸದ್ಯ ರಾಜ್ಯ ನೇಕಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದಾರೆ.
'ಹಿರಿತನ, ಪಕ್ಷನಿಷ್ಠೆ, ಸಿದ್ಧಾಂತಕ್ಕೆ ಬದ್ಧರಾಗಿರುವರಿಗೆ ಸಚಿವ ಸ್ಥಾನ ಕೊಟ್ಟಿಲ್ಲ.ಗಾಡ್ ಫಾದರ್ ಬೆಂಬಲವಿಲ್ಲದೆ ಪಕ್ಷವನ್ನು ಎಲ್ಲಾ ಹಂತದಲ್ಲಿ ಅಧಿಕಾರಕ್ಕೆ ತರುವಂತವರು. ಪಕ್ಷದ ಆದೇಶ, ಮನಸಾ ಪೂರ್ವಕ ಪಾಲನೆ ಮಾಡುವ, ಪಕ್ಷಕ್ಕಾಗಿ ಯಾವ ತ್ಯಾಗಕ್ಕೂ ಸಿದ್ಧರಿರುವವರಿಗೆ ಯಾವುದೇ ಸ್ಥಾನಮಾನ ಕೊಡದೇ ಹೌದಪ್ಪಗಳಿಗೆ ಈ ದಿನಗಳಲ್ಲಿ ಪಟ್ಟ ಕಟ್ಟುವ, ಚಾಳಿ ಬೆಳೆಯುತ್ತಿದೆ. ಅದನ್ನು ನೋಡಿ ನೋವಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ. ಅದಕ್ಕೆ ಹ್ಯಾಸ್ ಟ್ಯಾಗ್ ಹಾಕಿದ್ದಾರೆ.
ಇದು ನಮ್ಮ ದೌರ್ಬಲ್ಯ ಅಂತ ಭಾವಿಸಬಾರದು. ಹೊತ್ತು ಬಂದಂತೆ ಕೊಡೆ ಹಿಡಿಯುವವರಿಗೆ ಮಣೆ ಹಾಕುವುದನ್ನು ಬಿಟ್ಟು
ಪಕ್ಷ ನಿಷ್ಠರನ್ನು ಸಹಿತ ಪರಿಗಣಿಸಿದರೆ ನಿಮಗೂ ಗೌರವ ಮತ್ತು ಪಕ್ಷಕ್ಕೂ ಒಳ್ಳೆಯದಾಗುವುದರಲ್ಲಿ ಎರಡು ಮಾತಿಲ್ಲ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಸಮಾಧಾನ ತೋಡಿಕೊಂಡಿದ್ದಾರೆ.
ಕೊನೆಗೆ ಜೈ ಬಿಜೆಪಿ ಎಂದು ಉಲ್ಲೇಖಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.