ADVERTISEMENT

ದಕ್ಷಿಣ ಪದವೀಧರರ ಕ್ಷೇತ್ರ: ಮಧು ಮಾದೇಗೌಡ ಗೆಲುವು; ಖಾತೆ ತೆರೆದ ಕಾಂಗ್ರೆಸ್

​ಪ್ರಜಾವಾಣಿ ವಾರ್ತೆ
Published 16 ಜೂನ್ 2022, 6:51 IST
Last Updated 16 ಜೂನ್ 2022, 6:51 IST
ಮಧು ಜಿ.ಮಾದೇಗೌಡ
ಮಧು ಜಿ.ಮಾದೇಗೌಡ    

ಮೈಸೂರು: ವಿಧಾನಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮಧು ಜಿ.ಮಾದೇಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಇದರೊಂದಿಗೆ ಕ್ಷೇತ್ರದಲ್ಲಿ ಇದೇ‌ ಮೊದಲ ಬಾರಿಗೆ ಗೆಲುವಿನ ಖಾತೆ ತೆರೆದಿದೆ. ಎರಡನೇ ಪ್ರಾಶಸ್ತ್ಯದ ಮತಗಳ‌ ಎಣಿಕೆ ನಡೆಯುತ್ತಿದ್ದು, ಮಧು ಗೆಲುವು ಖಚಿತವಾಗಿದೆ.

ಬಿಜೆಪಿಯ ಮೈ.ವಿ. ರವಿಶಂಕರ್ 2ನೇ ಸ್ಥಾನದಲ್ಲಿದ್ದರೆ, ಜೆಡಿಎಸ್‌ನ ಎಚ್.ಕೆ. ರಾಮು ಮೂರನೇ ಸ್ಥಾನ ಗಳಿಸಿದ್ದಾರೆ. ಚುನಾವಣಾ ಆಯೋಗದಿಂದ ಅಧಿಕೃತವಾಗಿ ಫಲಿತಾಂಶ ಘೋಷಣೆ ಬಾಕಿ‌ ಇದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.