ADVERTISEMENT

ನರೇಗಾ: ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2019, 16:39 IST
Last Updated 27 ಫೆಬ್ರುವರಿ 2019, 16:39 IST

ರಾಯಚೂರು: ತಾಲ್ಲೂಕಿನ ಯದ್ಲಾಪುರದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬುಧವಾರ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಕುಸಿದು ಸಾವನ್ನಪ್ಪಿದ್ದಾರೆ.

ಯಲ್ಲಪ್ಪ (55) ಮೃತಪಟ್ಟವರು. ಬಿಸಿಲಿನ ತಾಪದಿಂದ ಮೃತಪಟ್ಟಿದ್ದು, ಪರಿಹಾರ ನೀಡಬೇಕು ಎಂದು ಕೂಲಿ ಕಾರ್ಮಿಕರು ಅಧಿಕಾರಿಗಳನ್ನು
ಒತ್ತಾಯಿಸಿದ್ದಾರೆ.

ಬೇಸಿಗೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಹಾಗೂ ಕೆಲಸದ ಅವಧಿ ಕಡಿತ ಮಾಡಬೇಕು ಎನ್ನುವುದಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ. ಈ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.