ADVERTISEMENT

ಮೋಹನ್ ಭಾಗವತ್‌ ಹತ್ಯೆ ಸಂಚು ಖಂಡನೀಯ: ಬಿ.ಸಿ.ಪಾಟೀಲ್

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2020, 6:34 IST
Last Updated 9 ಮಾರ್ಚ್ 2020, 6:34 IST
   

ಬೆಂಗಳೂರು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹತ್ಯೆ ಸಂಚು ಖಂಡನೀಯ ಎಂದು ಕೃಷಿ ಸಚಿವರಾದ ಬಿ‌.ಸಿ.ಪಾಟೀಲ್ ಹೇಳಿದ್ದಾರೆ.

ವಿಧಾನಸಭೆ ಕಲಾಪಕ್ಕೂ ಮುನ್ನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ ಪಾಟೀಲ್‌, ‘ರಾಷ್ಟ್ರೀಯವಾದಿಗಳ ಮೇಲಿನ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ವಿಚಾರವನ್ನು ಗುಪ್ತಚರ ಇಲಾಖೆ ನೀಡಿದೆ ಎಂಬುದು ತಿಳಿದುಬಂದಿದೆ‌. ಈ ಬಗ್ಗೆ ಗೃಹ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡುವೆ,’ ಎಂದು ತಿಳಿಸಿದರು.

‘ಆರ್‌ಎಸ್‌ಎಸ್‌ ಮುಖಂಡರನ್ನು ಹತ್ಯೆ ಮಾಡಲು ಹಾಗೂ ಆರ್‌ಎಸ್‌ಎಸ್ ಕಚೇರಿ ಮೇಲೆ ದಾಳಿ ನಡೆಯುವ ಬಗ್ಗೆ 'ಗ್ಲೋಬಲ್ ಟೆರರಿಸ್ಟ್ ಗ್ರೂಪ್‌’ನಲ್ಲಿ ಮಾಹಿತಿ ಹರಿದಾಡುತ್ತಿದೆ’ ಎಂದು ಕೇಂದ್ರ ಗುಪ್ತದಳದ ಅಧಿಕಾರಿಗಳು, ರಾಜ್ಯದ ಪೊಲೀಸರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.