ADVERTISEMENT

ಅಕ್ರಮ ಹಣ ವರ್ಗಾವಣೆ: ಇ.ಡಿ. ವಿಚಾರಣೆಗೆ ಹಾಜರಾದ ಡಿ.ಕೆ.ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2022, 6:53 IST
Last Updated 19 ಸೆಪ್ಟೆಂಬರ್ 2022, 6:53 IST
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್   

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಸೋಮವಾರ ಹಾಜರಾದರು.

ಶಿವಕುಮಾರ್ ಅವರಿಗೆ ಕಳೆದ ವಾರ ಇ.ಡಿ. ಅಧಿಕಾರಿಗಳು ಸಮನ್ಸ್ ನೀಡಿ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.
ಸೋಮವಾರ 11 ಗಂಟೆ ಸುಮಾರಿಗೆಇ.ಡಿ. ಕಚೇರಿಗೆ ಡಿ.ಕೆ.ಶಿವಕುಮಾರ್ ತಲುಪಿದರು.

ಯಾವ ವಿಷಯಕ್ಕೆ ಸಂಬಂಧಿಸಿ ಸಮನ್ಸ್ ನೀಡಿದ್ದಾರೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ವಿಚಾರಣೆ ಮುಗಿದ ಬಳಿಕ ಪ್ರತಿಕ್ರಿಯಿಸುತ್ತೇನೆ ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.