ADVERTISEMENT

ಇಬ್ಬರು ಸಾವು; ಮಂಗನ ಕಾಯಿಲೆ ಶಂಕೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2019, 19:05 IST
Last Updated 23 ಜನವರಿ 2019, 19:05 IST
ಎಚ್‌.ಡಿ.ಕೋಟೆ ತಾಲ್ಲೂಕು ತಿಮ್ಮನಹೊಸಹಳ್ಳಿ ಹಾಡಿಗೆ ಬುಧವಾರ ಆರೋಗ್ಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ತಾಲ್ಲೂಕು ಆರೋಗ್ಯಾಧಿಕಾರಿ ಟಿ.ರವಿ ಇದ್ದಾರೆ
ಎಚ್‌.ಡಿ.ಕೋಟೆ ತಾಲ್ಲೂಕು ತಿಮ್ಮನಹೊಸಹಳ್ಳಿ ಹಾಡಿಗೆ ಬುಧವಾರ ಆರೋಗ್ಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ತಾಲ್ಲೂಕು ಆರೋಗ್ಯಾಧಿಕಾರಿ ಟಿ.ರವಿ ಇದ್ದಾರೆ   

ಎಚ್.ಡಿ.ಕೋಟೆ: ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜ್ವರದಿಂದ ಇಬ್ಬರು ಮೃತಪಟ್ಟಿದ್ದು, ಮಂಗನ ಕಾಯಿಲೆ ಶಂಕೆ ವ್ಯಕ್ತವಾಗಿದೆ.

ತಿಮ್ಮನಹೊಸಳ್ಳಿ ಹಾಡಿಯ ಚಂದ್ರ, ಭಾಸ್ಕರ್ ಮೃತಪಟ್ಟವರು. ಜತೆಗೆ, ಇಬ್ಬರು ಕೇರಳದ ಮಾನಂದವಾಡಿ ತಾಲ್ಲೂಕಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ಗಮನಕ್ಕೆ ಬರುತ್ತಿದ್ದಂತೆ ಆರೋಗ್ಯಾಧಿಕಾರಿ ನೇತೃತ್ವದ ತಂಡ ಹಾಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

‘ಮೃತಪಟ್ಟಿರುವ ಇಬ್ಬರೂ ಹೆಚ್ಚಾಗಿ ಮದ್ಯ ಸೇವಿಸುತ್ತಿದ್ದು, ರಕ್ತದೊತ್ತಡ, ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದರು. ಮಾನಂದವಾಡಿ ಆಸ್ಪತ್ರೆಯಲ್ಲಿ ಇರುವವರು ಸದ್ಯ ಸುಧಾರಿಸಿಕೊಳ್ಳುತ್ತಿದ್ದಾರೆ. ಯಾರಲ್ಲೂ ಮಂಗನ ಕಾಯಿಲೆ ಲಕ್ಷಣಗಳು ಕಂಡು ಬಂದಿಲ್ಲ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.