ADVERTISEMENT

ಮತ್ತೆ ಕಾಣಿಸಿಕೊಂಡ ಮಂಗನ ಕಾಯಿಲೆ: ಆಸ್ಪತ್ರೆಗೆ ಯುವಕ ದಾಖಲು

​ಪ್ರಜಾವಾಣಿ ವಾರ್ತೆ
Published 9 ಜನವರಿ 2020, 16:53 IST
Last Updated 9 ಜನವರಿ 2020, 16:53 IST
ಸಾಗರ ತಾಲ್ಲೂಕಿನ ಭಾನ್ಕುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಜರವಳ್ಳಿ ಗ್ರಾಮದ ಭರತ್ ಎಂಬ ಯುವಕನಿಗೆ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡಿದ್ದು, ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಗುರುವಾರ ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದರು.
ಸಾಗರ ತಾಲ್ಲೂಕಿನ ಭಾನ್ಕುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಜರವಳ್ಳಿ ಗ್ರಾಮದ ಭರತ್ ಎಂಬ ಯುವಕನಿಗೆ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡಿದ್ದು, ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಗುರುವಾರ ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದರು.   

ಸಾಗರ: ಕಳೆದ ವರ್ಷ ತಾಲ್ಲೂಕಿನಲ್ಲಿ 16ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದ್ದ ಮಂಗನ ಕಾಯಿಲೆ ವೈರಾಣು ಈಗ ಮತ್ತೊಮ್ಮೆ ಕಾಣಿಸಿಕೊಂಡಿದೆ.

ಭಾನ್ಕುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಜರವಳ್ಳಿ ಗ್ರಾಮದ ಭರತ್ ಎಂಬ ಯುವಕನಲ್ಲಿ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡಿದ್ದು, ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಗುರುವಾರ ದಾಖಲಾಗಿದ್ದಾರೆ.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಸುದ್ದಿಗಾರರೊಂದಿಗೆ ಮಾತನಾಡಿ, ‘ಈ ವರ್ಷವೂ ಮಂಗನ ಕಾಯಿಲೆ ವೈರಾಣು ಕಾಣಿಸಿಕೊಂಡಿರುವುದರಿಂದ ಆರೋಗ್ಯ ಇಲಾಖೆ ರೋಗ ಹರಡುವುದನ್ನು ತಡೆಯಲು ಸಮರೋಪಾದಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ADVERTISEMENT

‘1950ರ ದಶಕದಲ್ಲಿ ಕಂಡುಹಿಡಿದಿದ್ದ ಚುಚ್ಚುಮದ್ದನ್ನೇ ಮಂಗನ ಕಾಯಿಲೆ ಪೀಡಿತ ಪ್ರದೇಶಗಳ ಜನರಿಗೆ ಮುಂಜಾಗ್ರತಾ ಕ್ರಮವಾಗಿ ನೀಡಲಾಗುತ್ತಿದೆ. ಈ ಸಂಬಂಧ ಹೊಸ ಸಂಶೋಧನೆಗೆ ಸರ್ಕಾರ ಮುಂದಾಗಬೇಕು. ಮಣಿಪಾಲದ ಆಸ್ಪತ್ರೆಗೆ ರೋಗಿಗಳನ್ನು ಕರೆದೊಯ್ಯಲು ಆಂಬುಲೆನ್ಸ್ ವ್ಯವಸ್ಥೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.