ADVERTISEMENT

ಐದು ದಿನ ಭಾರಿ ಮಳೆ ಸಾಧ್ಯತೆ: ಹಲವೆಡೆ ‘ಆರೆಂಜ್‌ ಅಲರ್ಟ್‌’ ಘೋಷಣೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2020, 3:19 IST
Last Updated 18 ಜುಲೈ 2020, 3:19 IST
ಚಿಕ್ಕಮಗಳೂರಿನ ಕಳಸ- ಹೊರನಾಡು ರಸ್ತೆಯ ಹೆಬ್ಬೊಳೆಯಲ್ಲಿ ಭದ್ರಾ ನದಿಯು ಗರಿಷ್ಠ ಮಟ್ಟದಲ್ಲಿ ಹರಿಯುತ್ತಿದೆ
ಚಿಕ್ಕಮಗಳೂರಿನ ಕಳಸ- ಹೊರನಾಡು ರಸ್ತೆಯ ಹೆಬ್ಬೊಳೆಯಲ್ಲಿ ಭದ್ರಾ ನದಿಯು ಗರಿಷ್ಠ ಮಟ್ಟದಲ್ಲಿ ಹರಿಯುತ್ತಿದೆ   
""

ಬೆಂಗಳೂರು: ‘ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದ್ದಾರೆ.

‘ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಮಳೆ, ಎಲ್ಲಿ ಎಷ್ಟು?: ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ಗರಿಷ್ಠ 19 ಸೆಂ.ಮೀ ಮಳೆಯಾಗಿದೆ. ಭಾಗಮಂಡಲ, ಕೊಲ್ಲೂರು 13, ಕುಂದಾಪುರ, ಪುತ್ತೂರು, ಚಿಕ್ಕಮಗಳೂರು 9, ಉಪ್ಪಿನಂಗಡಿ, ಮೂಡಿಗೆರೆ 8, ಮಡಿಕೇರಿಯಲ್ಲಿ 7 ಸೆಂ.ಮೀ ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.