ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವೆಡೆ ಶುಕ್ರವಾರ ಮಳೆ ಸುರಿಯಿತು.
ಮಂಗಳೂರಿನಲ್ಲಿ ಶುಕ್ರವಾರ ಮಧ್ಯಾಹ್ನದವರೆಗೂ ಬಿಸಿಲಿನ ವಾತಾವರಣವಿತ್ತು. 3 ಗಂಟೆಯ ನಂತರ ಮಳೆ ಆರಂಭವಾಗಿದೆ. ರಾತ್ರಿ ಮಂಗಳೂರು ನಗರ, ಪುತ್ತೂರು ಬಂಟ್ವಾಳ ಸುಳ್ಯ ಮುಂತಾದ ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ.
ಉಡುಪಿ ಜಿಲ್ಲೆಯ ಹಲವೆಡೆ ಮುಂಜಾನೆಯಿಂದಲೇ ಬಿಟ್ಟು ಬಿಟ್ಟು ಮಳೆಯಾಗುತ್ತಿತ್ತು. ರಾತ್ರಿ ವೇಳೆಗೆ ಮಳೆ ಚುರುಕಾಗಿತ್ತು. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಎನ್.ಆರ್.ಪುರ, ಬಾಳೆಹೊನ್ನೂರು, ಶೃಂಗೇರಿ ಭಾಗದಲ್ಲಿ ತುಂತುರು ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.