ಮೂಡಿಗೆರೆ: ತಾಲ್ಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ಮುಂಜಾನೆ ಲಾರಿಯೊಂದು ಕೆಟ್ಟು ರಸ್ತೆ ಮಧ್ಯೆ ನಿಂತಿದ್ದರಿಂದ 4 ಗಂಟೆಗೂ ಅಧಿಕ ಕಾಲ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡಿದರು.
ತುಮಕೂರಿನಿಂದ ಮಂಗಳೂರಿಗೆ ಸರಕು ಸಾಗಿಸುತ್ತಿದ್ದ ಲಾರಿ ಮುಂಜಾನೆ 4 ಗಂಟೆಯ ಸುಮಾರಿಗೆ 3ನೇ ತಿರುವಿನ ಬಳಿ ಆ್ಯಕ್ಸೆಲ್ ತುಂಡಾಗಿ ರಸ್ತೆಗೆ ಅಡ್ಡಲಾಗಿ ನಿಂತಿದ್ದರಿಂದ ಎರಡೂ ಕಡೆ ವಾಹನ ಸಂಚರಿಸಲಾಗದೆ ಬೆಳಿಗ್ಗೆ 8 ಗಂಟೆಯವರೆಗೂ ಸಂಚಾರ ಸ್ಥಗಿತವಾಗಿತ್ತು. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಹಿಟಾಚಿ ಯಂತ್ರದ ಮೂಲಕ ಲಾರಿಯನ್ನು ಎಳೆದೊಯ್ದು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.