ADVERTISEMENT

ಸಂಸ್ಕೃತ ವಿಶ್ವವಿದ್ಯಾಲಯ ಅಭಿವೃದ್ಧಿಗೆ ಅಶ್ವತ್ಥನಾರಾಯಣ ಬಳಿ ಸ್ವಾಮೀಜಿಗಳ ಮನವಿ

ಡಿಸಿಎಂ ಜತೆ 30ಕ್ಕೂ ಹೆಚ್ಚು ಸ್ವಾಮೀಜಿಗಳು ಚರ್ಚೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2021, 10:45 IST
Last Updated 11 ಜೂನ್ 2021, 10:45 IST
ವಿವಿಧ ಜಿಲ್ಲೆಗಳ ವಿವಿಧ ಮಠಗಳ ಮೂವತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಶುಕ್ರವಾರ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು – ಪ್ರಜಾವಾಣಿ ಚಿತ್ರ
ವಿವಿಧ ಜಿಲ್ಲೆಗಳ ವಿವಿಧ ಮಠಗಳ ಮೂವತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಶುಕ್ರವಾರ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು – ಪ್ರಜಾವಾಣಿ ಚಿತ್ರ   

ಬೆಂಗಳೂರು: ವಿವಿಧ ಜಿಲ್ಲೆಗಳ ವಿವಿಧ ಮಠಗಳ ಮೂವತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಶುಕ್ರವಾರ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ನಗರದ ಡಾಲರ್ಸ್‌ ಕಾಲೋನಿಯಲ್ಲಿರುವ ಡಿಸಿಎಂ ನಿವಾಸಕ್ಕೆ ಆಗಮಿಸಿದ ರಾಮನಗರ, ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಶ್ರೀಗಳು; ಮಾಗಡಿ ತಾಲೂಕಿನಲ್ಲಿರುವ ಸಂಸ್ಕೃತ ವಿಶ್ವವಿದ್ಯಾಲಯವನ್ನು ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ ಮಾಡುವುದೂ ಸೇರಿ ಕೆಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.

ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಕನ್ನಡಿಗರನ್ನೇ ನೇಮಕ ಮಾಡುವುದು ಹಾಗೂ ಸಂಸ್ಕೃತ ಪ್ರಸರಣೆಗೆ ಸೂಕ್ತ ಪ್ರೋತ್ಸಾಹ ಹಾಗೂ ಬಯಲುಸೀಮೆಯ ಈ ಜಿಲ್ಲೆಗಳಿಗೆ ನೀರಾವರಿ ಒದಗಿಸುವ ಬಗ್ಗೆ ಸ್ವಾಮೀಜಿಗಳು ಅಶ್ವತ್ಥನಾರಾಯಣ ಅವರ ಜತೆ ಮಾತುಕತೆ ನಡೆಸಿದರು.

ADVERTISEMENT

ಅಖಿಲ ಭಾರತ ಸನಾತನ ಮಠಾಧಿಪತಿಗಳ ಒಕ್ಕೂಟದ ಸೇವಾ ಟ್ರಸ್ಟ್‌ ವತಿಯಿಂದ ಕೊಳದ ಮಠದ ಶಾಂತವೀರ ಸ್ವಾಮೀಜಿ, ಬಸವಲಿಂಗ ಸ್ವಾಮೀಜಿ, ತುಮಕೂರು ಹಿರೇಮಠದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ, ಸೋಲೂರು ಚಿಲುಮ ಮಠದ ಬಸವಲಿಂಗ ಸ್ವಾಮೀಜಿ, ಭದ್ರಗಿರಿ ಮಠದ ವೀರಭದ್ರ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ತಮ್ಮಿಡಿಹಳ್ಳಿ ಮಠದ ಸಿದ್ದಲಿಂಗ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ಅನೇಕ ಸ್ವಾಮೀಜಿಗಳು ಆಗಮಿಸಿದ್ದರು.

ಸ್ವಾಮೀಜಿ ನೀಡಿದ ಮನವಿ ಪತ್ರ ಸ್ವೀಕರಿಸಿದ ಡಿಸಿಎಂ ಅವರು, ಅತಿ ಶೀಘ್ರದಲ್ಲೇ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಕೆಲಸಗಳನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.

ನಮ್ಮ ಸರ್ಕಾರ ‌ನೀರಾವರಿ ಯೋಜನೆಗಳ ಅನುಷ್ಠಾಕ್ಕೆ ಆದ್ಯತೆ‌ ನೀಡಲಿದೆ‌ ಎಂದು‌ ಸ್ವಾಮೀಜಿಗಳಿಗೆ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.