ADVERTISEMENT

ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2019, 12:37 IST
Last Updated 1 ಆಗಸ್ಟ್ 2019, 12:37 IST
   

ಬಳ್ಳಾರಿ: ನಗರದ ಮೇದಾರ ಕೇತಯ್ಯ ನಗರದ ನಿವಾಸಿ ಲಕ್ಷ್ಮಿ (25) ತಮ್ಮ ಇಬ್ಬರು ಮಕ್ಕಳಾದ ಉದಯ್‌ (3) ಮತ್ತು ಭೂಮಿಕಾ (1.5 ವರ್ಷ) ಅವರನ್ನು ಗುರುವಾರ ಮಧ್ಯಾಹ್ನ ತಮ್ಮ ಮನೆಯ ನೀರಿನ ಡ್ರಮ್‌ನಲ್ಲಿ ಮುಳುಗಿಸಿ ಕೊಂದು, ತಾವೂ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡರು.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಕಟ್ಟಡ ನಿರ್ಮಾಣ ಮೇಸ್ತ್ರಿ ಪತಿ ವೀರೇಶ್‌ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಕೌಲ್‌ಬಜಾರ್‌ ಠಾಣೆಯ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT