ಹುಬ್ಬಳ್ಳಿ:ಕೌಟುಂಬಿಕ ಕಲಹಕ್ಕೆ ಬೇಸತ್ತು ಹೆತ್ತ ಮಕ್ಕಳನ್ನೇ ತಾಯಿಯೊಬ್ಬರುವೇಲ್ ನಿಂದ ಬಿಗಿದು ಕೊಲೆ ಮಾಡಿದ ಹೃದಯ ವಿದ್ರಾವಕ ಘಟನೆ ಆಯೋಧ್ಯಾ ನಗರದಲ್ಲಿ ನಡೆದಿದೆ.
ಪ್ರೇಮಾ ಪರುಶುರಾಮ ಹುಲಕೋಟಿ ಎಂಬ ಮಹಿಳೆ ಈ ಕೃತ್ಯ ಎಸಗಿದ ತಾಯಿ.
ರೋಹಿತ್ (6) ರೋಹಿಣಿ (4) ಮೃತ ದುರ್ದೈವಿಗಳು. ಪತಿ ಪರಶುರಾಮ ಕೆಲಸಕ್ಕೆ ಹೊದ ಸಮಯದಲ್ಲಿ ಕೃತ್ಯ ಎಸಗಿದ್ದಾರೆ.
ತಾನೇ ಮಕ್ಕಳನ್ನುಕತ್ತು ಹಿಸುಕಿ ಕೊಂದಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾರೆ. ವಿಷಯ ತಿಳಿಯುತ್ತಿದಂತೆ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರ ಭೇಟಿ ನೀಡಿ ಪರೀಶಿಲನೆ ನಡೆಸಿದ್ದು,ತಾಯಿಯನ್ನು ವಶಕ್ಕೆ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.