ADVERTISEMENT

ಪಕ್ಷಾಂತರ ಹೇಳಿಕೆ: ಉಲ್ಟಾ ಹೊಡೆದ ಎಂಟಿಬಿ

​ಪ್ರಜಾವಾಣಿ ವಾರ್ತೆ
Published 2 ಮೇ 2022, 19:31 IST
Last Updated 2 ಮೇ 2022, 19:31 IST
ಎಂ.ಟಿ.ಬಿ. ನಾಗರಾಜ್
ಎಂ.ಟಿ.ಬಿ. ನಾಗರಾಜ್   

ಬೆಂಗಳೂರು: ‘ಒಂದು ಪಕ್ಷ ತೊರೆದು ಇನ್ನೊಂದು ಪಕ್ಷ ಸೇರಿರುವುದು ರಾಜಕೀಯ ಜೀವನದಲ್ಲಿ ನಾನು ಮಾಡಿದ ಮೊದಲ ತಪ್ಪು’ಎಂದು ಹೇಳಿಕೆ ನೀಡಿದ್ದ ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್‌ ಅವರು ಈಗ ಉಲ್ಟಾ ಹೊಡೆದಿದ್ದಾರೆ.

‘ಬಿಜೆಪಿ ಬಗ್ಗೆ ಯಾವುದೇ ಅಸಮಾಧಾನವಿಲ್ಲ. ನನ್ನ ಹೇಳಿಕೆಯ ಬಗ್ಗೆ ಯಾವುದೇ ರೀತಿ ಅಪಾರ್ಥ ಕಲ್ಪಿಸುವುದೂ ಬೇಡ. ಪಕ್ಷಾಂತರ ಕುರಿತ ನನ್ನ ಹೇಳಿಕೆ ಸೈದ್ಧಾಂತಿಕವಾದುದು. ಯಾರೇ ಆಗಲಿ ಪಕ್ಷಾಂತರ ಮಾಡುವುದು ತಪ್ಪು ಎಂಬ ಅರ್ಥದಲ್ಲಿ ಹೇಳಿದ್ದೇನೆ’ ಎಂದಿದ್ದಾರೆ.

‘ಬಿಜೆಪಿ ಬಗ್ಗೆ ಅಸಮಾಧಾನವೂ ಇಲ್ಲ, ಬಿಜೆಪಿಗೆ ಬಂದಿರುವುದು ತಪ್ಪು ಎಂದು ಭಾವಿಸಿಯೂ ಇಲ್ಲ. ಪಕ್ಷದಲ್ಲಿ ಎಲ್ಲ ನಾಯಕರು ವಿಶ್ವಾಸದಿಂದ ನಡೆಸಿಕೊಂಡಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

ADVERTISEMENT

‘ರಾಜಕೀಯದಲ್ಲಿ ನಾನು ಹಣ ಮಾಡಬೇಕು ಎಂದೇನಿಲ್ಲ. ಆ ವಿಷಯದಲ್ಲಿ ನಾನು ಇಂದಿಗೂ ಪರಿಶುದ್ಧನಾಗಿದ್ದೇನೆ. ರಾಜಕೀಯ ಜೀವನದಲ್ಲಿ ನಾನು ಮಾಡಿದ ಒಂದೇ ಒಂದು ತಪ್ಪು ಎಂದರೆ, ಒಂದು ಪಕ್ಷ ಬಿಟ್ಟು ಮತ್ತೊಂದು ಪಕ್ಷಕ್ಕೆ ಸೇರಿರುವುದು. ಅದರ ಅರಿವು ಈಗ ಆಗುತ್ತಿದೆ. ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಕಡೆಯವರೇ ನನ್ನನ್ನು ಪಕ್ಷದಿಂದ ಹೊರಗೆ ಕಳುಹಿಸಿದರು’ ಎಂದು ಇತ್ತೀಚೆಗೆ ಬಾಗೇಪಲ್ಲಿಯಲ್ಲಿ ನಡೆದ ಸಭೆಯಲ್ಲಿ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.