ADVERTISEMENT

ಮುಡಾ ಹಗರಣ | ಸಿದ್ದರಾಮಯ್ಯ ಮುಂದುವರಿದರೆ ಖುಷಿ: ವಿ. ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2024, 14:43 IST
Last Updated 17 ಆಗಸ್ಟ್ 2024, 14:43 IST
   

ಬೆಂಗಳೂರು: ‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿದರೆ ನನ್ನಷ್ಟು ಖುಷಿಪಡುವ ಮತ್ತೊಬ್ಬ ವ್ಯಕ್ತಿ ಇಲ್ಲ’ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಸನ್‌ಗೆ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ನುರಿತ ರಾಜಕಾರಣಿ. ಈ ವಿಚಾರದಲ್ಲಿ ಏನು ಮಾಡಬೇಕು ಎನ್ನುವುದು ಸಿದ್ದರಾಮಯ್ಯ ಸಾಹೇಬರಿಗೆ ಚೆನ್ನಾಗಿ ಗೊತ್ತಿದೆ’ ಎಂದರು.

‘ನಾನು ಅವರು ಬಹಳ ಆತ್ಮೀಯರು. ಒಟ್ಟಿಗೆ ಕೆಲಸ ಮಾಡಿದ್ದೇವೆ. ಒಂದು ದಿನದ ಹಿಂದಷ್ಟೇ  ಮಾತನಾಡಿದ್ದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರ ಕಾನೂನು ಪ್ರಕಾರ ನಡೆಯುತ್ತದೆ’ ಎಂದು ಹೇಳಿದರು

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.