ADVERTISEMENT

ಖರ್ಗೆ ಭೇಟಿಯಾದ ಮುದ್ದಹನುಮೇಗೌಡ

​ಪ್ರಜಾವಾಣಿ ವಾರ್ತೆ
Published 16 ಜನವರಿ 2024, 16:12 IST
Last Updated 16 ಜನವರಿ 2024, 16:12 IST
ಮುದ್ದಹನುಮೇಗೌಡ
ಮುದ್ದಹನುಮೇಗೌಡ   

ಬೆಂಗಳೂರು: ಬಿಜೆಪಿ ಮುಖಂಡ ಹಾಗೂ ತುಮಕೂರು ಮಾಜಿ ಸಂಸದ ಎಸ್‌.ಪಿ. ಮುದ್ದಹನುಮೇಗೌಡ ಅವರು ಕಾಂಗ್ರೆಸ್​ಗೆ ಮರಳಲು ಕಸರತ್ತು ನಡೆಸಿದ್ದಾರೆ.

ರಾಜ್ಯದ ಕಾಂಗ್ರೆಸ್‌ ನಾಯಕರನ್ನು ಭೇಟಿ ಮಾಡಿ ಈಗಾಗಲೇ ಚರ್ಚೆ ನಡೆಸಿರುವ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಂಗಳವಾರ ಭೇಟಿ ಮಾಡಿದ್ದಾರೆ. ಆ ಮೂಲಕ,  ಮುದ್ದಹನುಮೇಗೌಡ ಅವರು ಬಿಜೆಪಿ ತೊರೆದು ವಾಪಸ್ ‘ಕೈ’ ಹಿಡಿಯುವುದು ಬಹುತೇಕ ಖಚಿತವಾಗಿದೆ.

‌ಅತ್ತ ತುಮಕೂರಿನಲ್ಲಿ ಮಾತನಾಡಿರುವ ಸಚಿವ ಕೆ.ಎನ್. ರಾಜಣ್ಣ ಅವರು, ತುಮಕೂರು ಕ್ಷೇತ್ರದಿಂದ ಮುದ್ದಹನುಮೇಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎನ್ನುವ ಸುಳಿವು ನೀಡಿದ್ದಾರೆ. ಇದರ ಬೆನ್ನಲ್ಲೇ ಖರ್ಗೆ ಅವರನ್ನು ಮುದ್ದಹನುಮೇಗೌಡ ಭೇಟಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.