ADVERTISEMENT

ಮುದ್ದಣ ಕಾವ್ಯ ಪ್ರಶಸ್ತಿ: ಹಸ್ತಪ್ರತಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 7 ಜುಲೈ 2021, 19:31 IST
Last Updated 7 ಜುಲೈ 2021, 19:31 IST

ಮಂಗಳೂರು: ಕಾಂತಾವರ ಕನ್ನಡ ಸಂಘವು ಕೊಡಮಾಡುವ, 2021ನೇ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿಗಾಗಿ, ಸಿದ್ಧವಾಗಿರುವ ಕವನ ಸಂಗ್ರಹದ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ.

ಪ್ರಶಸ್ರಿಯು ₹10,000 ನಗದು ಹಾಗೂ ಪ್ರಮಾಣಪತ್ರವನ್ನು ಒಳಗೊಂಡಿದೆ. ಆಸಕ್ತರು ಹೆಚ್ಚಿನ ಮಾಹಿತಿಯನ್ನು ಕನ್ನಡ ಸಂಘದ ಇ–ಮೇಲ್‌ kannadasanghakanthavara@gmail.com ಮೂಲಕ ಪಡೆಯಬಹುದು.

ವಿಶೇಷ ಮಾಹಿತಿ ಬೇಕಾಗಿದ್ದಲ್ಲಿ ಮೊಬೈಲ್‌ ಸಂಖ್ಯೆ 9900701666 (ಅಧ್ಯಕ್ಷ) ಅಥವಾ 9008978366 (ಕಾರ್ಯದರ್ಶಿ) ಅವರನ್ನು ಸಂಪರ್ಕಿಸಬಹುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.

ADVERTISEMENT

ಹಸ್ತಪ್ರತಿಗಳನ್ನು ಸ್ವೀಕರಿಸಲು ಸೆ.15 ಕೊನೆಯ ದಿನಾಂಕ. ನವೆಂಬರ್‌ 1ರಂದು ಪ್ರಶಸ್ತಿಗೆ ಆಯ್ಕೆಯಾದವರ ಹೆಸರು ಘೋಷಣೆಯಾಗಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.