ADVERTISEMENT

ಭಾರಿ ಮುನ್ನಡೆ ಸಾಧಿಸಿದ ಮುನಿರತ್ನ: ಬೆಂಬಲಿಗರ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 6:25 IST
Last Updated 10 ನವೆಂಬರ್ 2020, 6:25 IST
ಆರ್‌.ಆರ್‌.ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ
ಆರ್‌.ಆರ್‌.ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ   

ಬೆಂಗಳೂರು: ಭಾರಿ ಕುತೂಹಲ ಮೂಡಿಸಿರುವ ಉಪ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಆರ್‌.ಆರ್. ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭಾರಿ ಮುನ್ನಡೆಯಲ್ಲಿದ್ದಾರೆ.

ಒಟ್ಟು 25 ಸುತ್ತುಗಳ ಪೈಕಿ ಈಗಾಗಲೇ ಒಂಬತ್ತು ಸುತ್ತುಗಳ ಮತ ಎಣಿಕೆ ಮುಕ್ತಾಯಗೊಂಡಿದ್ದು, ಮುನಿರತ್ನ ಅವರು 25 ಸಾವಿರಕ್ಕೂ ಮತಗಳ ಅಂತರದಿದ ಮುಂದಿದ್ದಾರೆ. ಆ ಮೂಲಕ, ಗೆಲುವಿನ ಕಡೆಗೆ ಸ್ಪಷ್ಟ ಹೆಜ್ಜೆ ಇಟ್ಟಿದ್ದಾರೆ. ಕಾಂಗ್ರೆಸ್‌ನ ಕುಸುಮಾ ಎರಡನೇ ಸ್ಥಾನದಲ್ಲಿದ್ದು, ಜೆಡಿಎಸ್‌ನ ಕೃಷ್ಣ ಮೂರ್ತಿ ಮೂರನೇ ಸ್ಥಾನದಲ್ಲಿದ್ದಾರೆ.

ಒಂಬತ್ತನೇ ಸುತ್ತಿನ ಅಂತ್ಯಕ್ಕೆ ಮುನಿರತ್ನ 50,387 ಮತಗಳನ್ನು ಪಡೆದರೆ, ಅವರ ಸಮೀಪ ಸ್ಪರ್ಧಿ ಕಾಂಗ್ರೆಸ್‌ನ ಕುಸುಮಾ 25,161 ಮತಗಳನ್ನು ಪಡೆದಿದ್ದಾರೆ. ಜಿಡಿಎಸ್‌ನ ಕೃಷ್ಣಮೂರ್ತಿ ಅವರಿಗೆ 1862 ಮತಗಳು ಮಾತ್ರ ಬಂದಿವೆ. ಮುನಿರತ್ನ ಅವರ ಅಂತರ 25,226 ಮತಗಳು. ಈವರೆಗೆ ಎಣಿಕೆ ನಡೆದ ಎಲ್ಲ ಸುತ್ತುಗಳಲ್ಲೂ ಮುನಿರತ್ನ ಮುನ್ನಡೆ ಕಾಯ್ದುಕೊಂಡೇ ಬಂದಿದ್ದಾರೆ.

ADVERTISEMENT

ಅದಾಗಲೇ ಮುನಿರತ್ನ ಬೆಂಬಲಿಗರು ಸಂಭ್ರಮಾಚರಣೆ ಆರಂಭಿಸಿದ್ದಾರೆ. ಮತ ಎಣಿಕೆ ಕೇಂದ್ರದ ಎದುರು ಬಿಜೆಪಿಯ ನೂರಾರು ಕಾರ್ಯಕರ್ತರು ಜಮಾಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಮುನಿರತ್ನ ಪರ ಘೋಷಣೆ ಕೂಗುತ್ತಿದ್ದಾರೆ. ಗುಂಪುಗೂಡಿದವರನ್ನು ಪೊಲೀಸರು ಚದುರಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.