ರಾಯಚೂರು:ಜಿಲ್ಲಾ ವಿಶ್ವಕರ್ಮ ಸಮಾಜದಿಂದ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಚಿತ್ರನಟ ಭುವನ ಹಾಗೂ ಹರ್ಷಿಕಾ ಪೂಣಚ್ಚ ಪಾಲ್ಗೊಂಡಿದ್ದರು.
ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಈಚೆಗೆ ಸಾಂತ್ವನ ಹೇಳುವುದಕ್ಕೆ ರಾಯಚೂರಿಗೆ ಬಂದಿದ್ದ ಅವರು, ಪ್ರತಿಭಟನೆ ನಡೆಸುವ ದಿನದಂದು ಪಾಲ್ಗೊಳ್ಳುವುದಾಗಿ ಕುಟುಂಬದ ಸದಸ್ಯರಿಗೆ ಹೇಳಿ ಹೋಗಿದ್ದರು.
ಅದರಂತೆಯೇ, ಪ್ರತಿಭಟನೆಯಲ್ಲಿ ಪಾಲ್ಗೊಂಡು ತೆರೆದ ವಾಹನದಲ್ಲಿ ನಿಂತುಕೊಂಡು ವಿದ್ಯಾರ್ಥಿನಿ ಸಾವಿನ ತನಿಖೆಗೆ ಚುರುಕು ಮಾಡುವಂತೆ ಒತ್ತಾಯಿಸಿದರು. ಇಂತಹ ಘಟನೆಗಳು ಮರುಕಳಿಸಬಾರದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.