ಬೆಂಗಳೂರು: ಚಿತ್ರದುರ್ಗದ ‘ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ’ಕ್ಕೆ (ಎಸ್ಜೆಎಂ) ರಾಜ್ಯ
ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿದ ಆದೇಶವನ್ನು ರದ್ದುಪಡಿಸಿದ್ದ ಏಕಸದಸ್ಯ ನ್ಯಾಯ
ಪೀಠದ ಆದೇಶ ಪ್ರಶ್ನಿಸಲಾದ ಮೇಲ್ಮನವಿ ವಿಚಾರಣೆಯನ್ನು ಹೈಕೋರ್ಟ್ ಇದೇ 23ಕ್ಕೆ ಮುಂದೂಡಿದೆ.
ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಲಾದ ಒಟ್ಟು ಏಳು ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ಮುಂದುವರಿಸಬೇಕಿತ್ತು. ಆದರೆ, ಅಡ್ವೊಕೇಟ್ ಜನರಲ್ ವಾದ ಮಂಡನೆಗೆ ಲಭ್ಯವಿಲ್ಲದ ಕಾರಣ
ಸರ್ಕಾರಿ ವಕೀಲರ ಕೋರಿಕೆ ಯಂತೆ ವಿಚಾರಣೆಯನ್ನು ಮುಂದೂಡಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.