ADVERTISEMENT

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿ: ಫೋನ್‌ ಸಂಭಾಷಣೆಯ ಆಡಿಯೊ ವೈರಲ್‌

ಮಾಜಿ ಸಚಿವೆ ರಾಣಿ ಸತೀಶ್‌ ಹಾಗೂ ಮಹಡಿ ಶಿವಮೂರ್ತಿ ಸಂಭಾಷಣೆಯ ಆಡಿಯೊ ವೈರಲ್‌

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2022, 20:31 IST
Last Updated 18 ಅಕ್ಟೋಬರ್ 2022, 20:31 IST
   

ಚಿತ್ರದುರ್ಗ: ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾಶ್ರೀ ಬಂಧನಕ್ಕೆ ಒಳಗಾಗಿರುವುದಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವೆ ರಾಣಿ ಸತೀಶ್‌ ಹಾಗೂ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಮಹಡಿ ಶಿವಮೂರ್ತಿ ನಡುವೆ ನಡೆದ ಫೋನ್‌ ಸಂಭಾಷಣೆಯ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಸುಮಾರು 12 ನಿಮಿಷದ ಮಾತುಕತೆಯಲ್ಲಿ ಹಲವು ವಿಚಾರಗಳು ಚರ್ಚೆಗೆ ಬಂದಿವೆ. ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಆಕ್ರೋಶ, ಯಡಿಯೂರಪ್ಪ ಸೇರಿದಂತೆ ಇತರ ರಾಜಕಾರಣಿಗಳು ಮಠದಲ್ಲಿಟ್ಟ ಹಣದ ಬಗ್ಗೆಯೂ ಪ್ರಸ್ತಾಪವಾಗಿದೆ.

‘ಮುರುಘಾಶ್ರೀ ಪ್ರಕರಣ ಅಸಹ್ಯ ಮೂಡಿಸಿದೆ. ಜೈಲಿನಲ್ಲಿದ್ದರೂ ಮಠ ಇನ್ನೂ ಅವರ ಹಿಡಿತದಲ್ಲಿದೆ. ಭಯ, ಲಜ್ಜೆ ಇಲ್ಲದ ವರ್ತನೆ ಇದು. ವೀರಶೈವರಿಂದ ಮಠ ಕೈತಪ್ಪುವ ಆತಂಕ ಎದುರಾಗಿದೆ. ವೀರಶೈವ ಲಿಂಗಾಯತ ಮಹಾಸಭಾ ಈ ಸಂಬಂಧ ಧ್ವನಿ ಎತ್ತಬೇಕು.
ಮಠಕ್ಕೆ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಬೇಕಿದೆ’ ಎಂದು ರಾಣಿ ಸತೀಶ್‌ ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

ಈ ಆಡಿಯೊ ಸಂಭಾಷಣೆಯು ರಾಣಿ ಸತೀಶ್‌ ಹಾಗೂತಮ್ಮ ನಡುವೆ ನಡೆದಿರುವುದೇ ಆಗಿದೆ ಎಂದು ಮಹಡಿ ಶಿವಮೂರ್ತಿ ಖಚಿತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.