ADVERTISEMENT

ಮೈಸೂರಿನ ಒಡನಾಡಿ ಸಂಸ್ಥೆ ವಿರುದ್ಧ ದೂರು ನೀಡಿದ ಮುರುಘಾ ಮಠದ ಉಸ್ತುವಾರಿ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2022, 5:01 IST
Last Updated 10 ನವೆಂಬರ್ 2022, 5:01 IST
ಉಸ್ತುವಾರಿ ಬಸವಪ್ರಭು ಸ್ವಾಮೀಜಿ
ಉಸ್ತುವಾರಿ ಬಸವಪ್ರಭು ಸ್ವಾಮೀಜಿ   

ಚಿತ್ರದುರ್ಗ: ‘ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸುವಂತೆ ವಿದ್ಯಾರ್ಥಿನಿಯರಿಗೆ ಪ್ರಚೋದಿಸಲಾಗಿದ್ದು, ಈ ಕುರಿತು ಈ ಬಗ್ಗೆ ತನಿಖೆ ನಡೆಸಬೇಕು’ ಎಂದು ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಠದ ಪ್ರೌಢಶಾಲೆಯ ಮಾಜಿ ಉದ್ಯೋಗಿ ಬಸವರಾಜೇಂದ್ರ, ಮುರುಘಾ ಮಠದ ಗಾಯತ್ರಿ, ಮೈಸೂರಿನ ಒಡನಾಡಿ ಸಂಸ್ಥೆಯ ವಿರುದ್ಧ ದೂರು ನೀಡಲಾಗಿದ್ದು, ಇಬ್ಬರು ನಡೆಸಿದ ಸಂಭಾಷಣೆಯ ಆಡಿಯೊವೊಂದನ್ನು ದೂರಿನೊಂದಿಗೆ ಸಲ್ಲಿಸಲಾಗಿದೆ.

‘ಗಾಯತ್ರಿ ಎಂಬುವವರು ಹಣದ ಆಸೆಗೆ ಒಡನಾಡಿ ಸೇವಾ ಸಂಸ್ಥೆ ಜತೆ ಶಾಮೀಲಾಗಿ, ಮಕ್ಕಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಶರಣರ ವಿರುದ್ಧ ವ್ಯವಸ್ಥಿತ ಪಿತೂರಿ ಮಾಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ADVERTISEMENT

ಸ್ಥಳ ಮಹಜರು:ಎರಡನೇ ಆರೋಪಿ ಹಾಸ್ಟಲ್‌ನ ಮಹಿಳಾ ವಾರ್ಡನ್‌ರನ್ನು ಬುಧವಾರ ಮುರುಘಾ ಮಠಕ್ಕೆ ಕರೆ ತಂದ ಪೊಲೀಸರು, ಎರಡನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.