ಚಿತ್ರದುರ್ಗ: ಲಿಂಗಾಯತರಿಗೆ ಸ್ವತಂತ್ರ ಧರ್ಮದ ಮಾನ್ಯತೆ ನೀಡುವಂತೆ ರಾಜ್ಯ ಸರ್ಕಾರ ಕಳುಹಿಸಿದ್ದ ಪ್ರಸ್ತಾವವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿರುವುದಕ್ಕೆ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ವಿಷಾದ ವ್ಯಕ್ತಪಡಿಸಿದ್ದಾರೆ.
‘ವೀರಶೈವ ಧರ್ಮಕ್ಕೆ ಸ್ವತಂತ್ರ ಸ್ಥಾನ ನೀಡುವಂತೆ ಕೋರಿದಾಗ ಕೊಟ್ಟಿದ್ದ ಕಾರಣಗಳನ್ನೇ ಈಗಲೂ ಮುಂದಿಟ್ಟು ಪ್ರಸ್ತಾವವನ್ನು ಹಿಂದಿರುಗಿಸಲಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರ ನಿರೀಕ್ಷಿತ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.