ADVERTISEMENT

ಮುಖ್ಯಮಂತ್ರಿ ಚಂದ್ರು ಸೇರಿ ಐವರಿಗೆ ಮುರುಘಾಶ್ರೀ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2020, 8:19 IST
Last Updated 19 ಅಕ್ಟೋಬರ್ 2020, 8:19 IST
‘ಮುಖ್ಯಮಂತ್ರಿ’ ಚಂದ್ರು
‘ಮುಖ್ಯಮಂತ್ರಿ’ ಚಂದ್ರು   

ಚಿತ್ರದುರ್ಗ: ಇಲ್ಲಿನ ಮುರುಘಾ ಮಠದ ಶರಣ ಸಂಸ್ಕೃತಿ ಉತ್ಸವದಲ್ಲಿ ಪ್ರದಾನ ಮಾಡುವ ‘ಮುರುಘಾಶ್ರೀ’ ಪ್ರಶಸ್ತಿಗೆ ಐವರನ್ನು ಆಯ್ಕೆ ಮಾಡಲಾಗಿದೆ.

‘ರಂಗಭೂಮಿ, ಸಿನಿಮಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ನಟ ‘ಮುಖ್ಯಮಂತ್ರಿ’ ಚಂದ್ರು, ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಬಿಲ್ಲಪ್ಪ, ಬಸವತತ್ವ ಪ್ರಚಾರಕರಾದ ಹುಲುಸೂರು ಗುರುಬಸವೇಶ್ವರ ಮಠದ ಶಿವಾನಂದ ಸ್ವಾಮೀಜಿ, ಮದ್ಯಪಾನ ವಿರೋಧಿ ಹೋರಾಟಗಾರ್ತಿ ಸ್ವರ್ಣ ಭಟ್‌ ಹಾಗೂ ಧರ್ಮದರ್ಶಿ ಎಸ್‌.ಷಣ್ಮುಖಪ್ಪ ಅವರು ಮುರುಘಾಶ್ರೀ ಪ್ರಶಸ್ತಿಗೆ ಭಾಜನರಾಗಲಿದ್ದಾರೆ’ ಎಂದು ಶಿವಮೂರ್ತಿ ಮುರುಘಾ ಶರಣರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಭರಮಣ್ಣನಾಯಕ ಶೌರ್ಯ ಪ್ರಶಸ್ತಿಗೆ ಹರಿಯಾಣದ ಜಾಹ್ನವಿ ಪನ್ವಾರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಹತ್ತು ಭಾಷೆಯಲ್ಲಿ ಮಾತನಾಡಬಲ್ಲ ಸಾಮರ್ಥ್ಯವನ್ನು 17 ವರ್ಷದ ಬಾಲಕಿ ಪನ್ವಾರ್‌ ಹೊಂದಿದ್ದಾರೆ. ಮುರುಘಾಶ್ರೀ ಹಾಗೂ ಭರಮಣ್ಣನಾಯಕ ಶೌರ್ಯ ಪ್ರಶಸ್ತಿಯು ₹ 25 ಸಾವಿರ ನಗದು ಹಾಗೂ ಫಲಕ ಒಳಗೊಂಡಿರುತ್ತದೆ. ಅ.24ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.