ADVERTISEMENT

ಮುರುಘಾಶ್ರೀ ನ್ಯಾಯಾಂಗ ಬಂಧನ ವಿಸ್ತರಣೆ

ಲೈಂಗಿಕ ಕಿರುಕುಳ ಪ್ರಕರಣ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2022, 19:53 IST
Last Updated 14 ಸೆಪ್ಟೆಂಬರ್ 2022, 19:53 IST
ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯಕ್ಕೆ ಬುಧವಾರ ಮುರುಘಾ ಶರಣರನ್ನು ಪೊಲೀಸರು ಕರೆ ತಂದರು
ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯಕ್ಕೆ ಬುಧವಾರ ಮುರುಘಾ ಶರಣರನ್ನು ಪೊಲೀಸರು ಕರೆ ತಂದರು   

ಚಿತ್ರದುರ್ಗ: ಪ್ರೌಢಶಾಲೆ ವಿದ್ಯಾರ್ಥಿ ನಿಯರಿಗೆ ಲೈಂಗಿಕ ಕಿರುಕುಳ ನೀಡಿ ರುವ ಆರೋಪದಲ್ಲಿ ಬಂಧಿತ ರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಹಾಗೂ ಹಾಸ್ಟೆಲ್‌ನ ಮಹಿಳಾ ವಾರ್ಡನ್‌ ಅವರ ನ್ಯಾಯಾಂಗ ಬಂಧನವನ್ನು ಇದೇ 27ರವರೆಗೆ ವಿಸ್ತರಿಸಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಕೆ. ಕೋಮಲಾ ಆದೇಶಿಸಿದ್ದಾರೆ.

ನ್ಯಾಯಾಂಗ ಬಂಧನ ಅವಧಿ ಇದೇ 14ಕ್ಕೆ ಪೂರ್ಣಗೊಂಡಿದ್ದರಿಂದ ಪೊಲೀಸರು ಆರೋಪಿಗಳನ್ನು ಬುಧವಾರ ಮಧ್ಯಾಹ್ನ 12.30ಕ್ಕೆ ನ್ಯಾಯಾ ಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾ ಧೀಶರು 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದರು.

ಸೆ. 16ಕ್ಕೆ ಸರ್ಕಾರಿ ವಕೀಲರು ಪ್ರತಿವಾದ ಮಂಡಿಸಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.