ಬೆಂಗಳೂರು: ‘ಜೆಡಿಎಸ್ ಬಂಡಾಯ ಶಾಸಕ ಎಚ್.ವಿಶ್ವನಾಥ್ರಾಜೀನಾಮೆಯಿಂದ ತೆರವಾಗಿರುವ ಹುಣಸೂರು ವಿಧಾನಸಭೆ ಉಪಚುನಾವಣೆಯಲ್ಲಿ ನನ್ನಪುತ್ರ ಸ್ಪರ್ಧಿಸುತ್ತಿಲ್ಲ’ಎಂದು ಮಾಜಿ ಸಚಿವ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ನಗರದ ಡಾಲರ್ಸ್ ಕಾಲೋನಿಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯ ತಿಳಿಸಿದರು.
‘ವೈಯಕ್ತಿಕವಾಗಿ ನನಗೆ ಸಾಕಷ್ಟು ಬೇಸರವಾಗಿದೆ. ಹೀಗಾಗಿ ಜೆಡಿಎಸ್ ಕಾರ್ಯಕ್ರಮಗಳಿಂದ ದೂರ ಉಳಿದಿದ್ದೇನೆ. ನಾನು ಯಾವುದೇ ಪಕ್ಷ ಸೇರಲ್ಲ. ಮುಂದಿನ ಮೂರೂವರೆ ವರ್ಷ ನಾನು ಏನೂ ಹೇಳಲ್ಲ’ ಎಂದು ಹೇಳಿದರು.
‘ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಾಗಬೇಕಿದೆ. ಈ ಬಗ್ಗೆ ಮುಖ್ಯಮಂತ್ರಿಜತೆ ಚರ್ಚಿಸಲು ಬಂದಿದ್ದೇನೆ. ರಾಜಕೀಯ ವಿಷಯದ ಬಗ್ಗೆ ಮಾತನಾಡಿಲ್ಲ.ಈ ಭೇಟಿಕುರಿತು ವಿಶೇಷ ಅರ್ಥ ಕಲ್ಪಿಸುವುದು ಬೇಡ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.