ADVERTISEMENT

ರಾಜ್ಯ ಸರ್ಕಾರ 2021ರಲ್ಲಿಯೇ ಉಳಿದಿದೆ, ಟೇಕ್ ಆಫ್ ಆಗಿಯೇ ಇಲ್ಲ: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಜುಲೈ 2022, 13:15 IST
Last Updated 19 ಜುಲೈ 2022, 13:15 IST
ಸಿದ್ದರಾಮಯ್ಯ
ಸಿದ್ದರಾಮಯ್ಯ    

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ 2021ರಲ್ಲಿಯೇ ಉಳಿದುಬಿಟ್ಟಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ದಸರಾ ಪೂರ್ವಭಾವಿ ಸಭೆಯ ಕಾರ್ಯಸೂಚಿ ಪಟ್ಟಿಯಲ್ಲಿ ಹಿಂದಿನ ವರ್ಷದ ದಿನಾಂಕ ಪ್ರಕಟಿಸಿರುವ ಕುರಿತು ಟ್ವೀಟ್ ಮಾಡಿರುವ ಅವರು, ‘ರಾಜ್ಯ ಬಿಜೆಪಿ ಸರ್ಕಾರ 2021ರಲ್ಲಿಯೇ ಉಳಿದುಬಿಟ್ಟಿದೆ. ‘ಟೇಕ್ ಆಫ್’ ಆಗಿಯೇ ಇಲ್ಲ ಎನ್ನುವುದಕ್ಕೆ ಬೇರೆ ಸಾಕ್ಷಿ ಬೇಕೇ’ ಎಂದು ಪ್ರಶ್ನಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಆಯೋಜಿಸಿದ್ದ ದಸರಾ ಪೂರ್ವಭಾವಿ ಸಭೆಯ ಕಾರ್ಯಸೂಚಿ ಪಟ್ಟಿಯಲ್ಲಿ ಹಿಂದಿನ ವರ್ಷದ ದಿನಾಂಕ ಮುದ್ರಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.