ADVERTISEMENT

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮೈಸೂರು ದಸರಾ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2022, 14:07 IST
Last Updated 10 ಸೆಪ್ಟೆಂಬರ್ 2022, 14:07 IST
ರಾಷ್ಟ್ರಪತಿ ದ್ರೌಪದಿ ಮುರ್ಮು
ರಾಷ್ಟ್ರಪತಿ ದ್ರೌಪದಿ ಮುರ್ಮು    

ಬೆಂಗಳೂರು: ‘ಈ ಬಾರಿಯ ಮೈಸೂರು ದಸರಾವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಶನಿವಾರ ಹೇಳಿದರು.

‘ದಸರಾ ಸಿದ್ಧತೆ ಕುರಿತು ಈಚೆಗೆ ಪೂರ್ವಭಾವಿ ನಡೆಸಲಾಗಿತ್ತು. ಸಭೆಯಲ್ಲಿ ಉದ್ಘಾಟಕರ ಆಯ್ಕೆಯ ನಿರ್ಧಾರವನ್ನು ಮುಖ್ಯಮಂತ್ರಿ ವಿವೇಚನೆಗೆ ಬಿಡಲಾಗಿತ್ತು. ಸುದೀರ್ಘವಾಗಿ ಯೋಚಿಸಿ ದೇಶದ ಪ್ರಥಮ ಪ್ರಜೆಯನ್ನು ಉದ್ಘಾಟನೆಗೆ ಕರೆಯಲು ತೀರ್ಮಾನಿಸಿ ಅವರ ಕಚೇರಿಗೆ ಪತ್ರ ಬರೆಯಲಾಗಿತ್ತು. ಸೆ.26ರಂದು ನಡೆಯುವ ದಸರಾ ಉದ್ಘಾಟನೆಗೆ ಬರುವುದಾಗಿ ಒಪ್ಪಿ ರಾಷ್ಟ್ರಪತಿ ಪತ್ರ ಬರೆದಿದ್ದಾರೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT