ADVERTISEMENT

ದಸರೆ ಸಮಯದಲ್ಲೇ ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2019, 8:39 IST
Last Updated 22 ಆಗಸ್ಟ್ 2019, 8:39 IST
   

ಮೈಸೂರು: ಜಗತ್ಪ್ರಸಿದ್ಧದಸರೆಗೆ ಸಿದ್ಧತೆ ನಡೆಯುತ್ತಿರುವ ಸಂದರ್ಭದಲ್ಲಿ ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಸಚಿವರಿಲ್ಲದೇ ದಸರಾ ಸಿದ್ಧತೆಗೆ ಈಗಾಗಲೇ ಹಿನ್ನಡೆ ಉಂಟಾಗಿದೆ. ದಸರಾ ವಿಶೇಷಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಯನ್ನು ಈ ಹಂತದಲ್ಲಿ ವರ್ಗಾವಣೆ ಮಾಡಿರುವುದು ಅಚ್ಚರಿ ಉಂಟು ಮಾಡಿದೆ.

ದಸರೆ ಉದ್ಘಾಟನೆಗೆ ಕೇವಲ 35 ದಿನಗಳು ಬಾಕಿ ಇದ್ದು ಹಲವಾರು ಕಾಮಗಾರಿಗಳು ನಡೆಯಬೇಕಿದೆ, ಟೆಂಡರ್ ಕರೆಯಬೇಕಿದೆ, ಉಪಸಮಿತಿ ರಚಿಸಿ ಅಧಿಕಾರಿಗಳ ಸಭೆ ನಡೆಸಬೇಕಿದೆ. ಹೀಗಾಗಿ, ನೂತನ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮುಂದೆ ದೊಡ್ಡ ಸವಾಲು ಇದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.