ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೀಡಿರುವ ಹೇಳಿಕೆ ಬಗ್ಗೆ ಕಾಂಗ್ರೆಸ್ ವ್ಯಂಗ್ಯವಾಡಿದೆ.
‘ಕಾಂಗ್ರೆಸ್ ಸರ್ಕಾರವಿದ್ದಾಗ ಎಲ್ಲಿಯೇ ಕೊಲೆ, ಸುಲಿಗೆ, ಅತ್ಯಾಚಾರ ನಡೆಯಲಿ ಅಲ್ಲಿಗೆ ರಣಹದ್ದುಗಳಂತೆ ಹಾರಿಬಂದು ಸರ್ಕಾರವೇ ಕಾರಣವೆಂದು ಎಗರಿ ಬೀಳುತ್ತಿದ್ದಿರಲ್ಲ ಶೋಭಾ ಕರಂದ್ಲಾಜೆ ಅವರೇ, ಉತ್ತರದಾಯಿತ್ವದ ಸ್ಥಾನ ಸಿಕ್ಕಮೇಲೆ ಬಾಯಿ ಮುಚ್ಚಿಕೊಳ್ಳುವ ನೀವು ಹೋರಾಟಗಾರ್ತಿಯಲ್ಲ, ಹಾರಾಟಗಾರ್ತಿ ಅಷ್ಟೇ!’ ಎಂದು ಕಾಂಗ್ರೆಸ್ನ ಕರ್ನಾಟಕ ಘಟಕದ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಶುಕ್ರವಾರ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶೋಭಾ, ಈಗ ನಾನು ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದೇನೆ. ಈ ಕಾರಣದಿಂದ ಹೋರಾಟಗಾರ್ತಿಯಂತೆ ಮಾತನಾಡಲು ಆಗದು ಎಂದು ಹೇಳಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.