ADVERTISEMENT

ಮುಂದಿನ ದಿನಗಳಲ್ಲಿ ಮೈಸೂರು ಭಾಗಕ್ಕೆ ಸಚಿವ ಸ್ಥಾನ: ಸುರೇಶ್‌ ಕುಮಾರ್‌ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2020, 6:59 IST
Last Updated 10 ಫೆಬ್ರುವರಿ 2020, 6:59 IST
   

ಮೈಸೂರು: ಮುಂದಿನ ದಿನಗಳಲ್ಲಿ ಮೈಸೂರು ಭಾಗಕ್ಕೆ ಸಚಿವ ಸ್ಥಾನ ಸಿಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.

ಖಾತೆ ಹಂಚಿಕೆ ವಿಚಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸೇರಿದ್ದು. ಮೈಸೂರು ಭಾಗದ ಅಭಿವೃದ್ಧಿಗೆ ಸಚಿವ‌ ಸ್ಥಾನ ಸಿಗಬೇಕು ಎನ್ನುವ ಬೇಡಿಕೆ ಇದೆ. ಭವಿಷ್ಯದ ದಿನಗಳಲ್ಲಿ ಇದು ಈಡೇರಲಿದೆ ಎಂದು ಅವರು ಸೋಮವಾರ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದರು.

ಟಿಪ್ಪು ವಿಷಯ ಕೈಬಿಡುವುದಿಲ್ಲ: ಪಠ್ಯದಿಂದ ಟಿಪ್ಪು ವಿಷಯ ಕೈ ಬಿಡುವ ವಿಚಾರ ಈ ಶೈಕ್ಷಣಿಕ ವರ್ಷದಲ್ಲಿ ಸಾಧ್ಯವಿಲ್ಲ ಎಂದರು.

ADVERTISEMENT

ಈ ಬಗ್ಗೆ ಹೆಚ್ಚಿನ ಚರ್ಚೆಯಾಗಬೇಕಿದೆ. ಸಮಿತಿಯೊಂದನ್ನು ಇದಕ್ಕಾಗಿ ರಚಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮಕ್ಕಳ ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಶಿಕ್ಷಕರ‌ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಶಾಲೆಯಲ್ಲಿ ಮೊಬೈಲ್ ಫೋನ್ ಬಳಸದಂತೆ ಸೂಚನೆ ನೀಡಲಾಗಿದೆ ಎಂದರು.

ಇದು ಶಿಕ್ಷಕರ ಮನಸ್ಥಿತಿಯ ವಿಚಾರ. ದೊಡ್ಡವರ ಮನಸ್ಸಿನಲ್ಲಿರುವ ವಿಕೃತಿಯ ಪ್ರದರ್ಶನ. ಮಕ್ಕಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ‌ ಉಂಟಾಗದಂತೆ ಎಚ್ಚರ ವಹಿಸುವುದು ಜವಾಬ್ದಾರಿಯಾಗಬೇಕು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.