ADVERTISEMENT

ರಿಯಾಯಿತಿ ದರದ ಸಿಲ್ಕ್‌ ಸೀರೆ ಖರಿದಿಗೆ ಮೈಸೂರಿನಲ್ಲಿ ನೂಕುನುಗ್ಗಲು,ಇತರೆಡೆ ಸರದಿ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2018, 11:27 IST
Last Updated 11 ಸೆಪ್ಟೆಂಬರ್ 2018, 11:27 IST
ರಿಯಾಯಿತಿ ದರದಲ್ಲಿ ಮೈಸೂರು ಸಿಲ್ಕ್ ಸೀರೆ ನೀಡಲಾಗುತ್ತಿದೆ ಎಂಬ ಮಾಹಿತಿ ಮೇಲೆ ನೂರಾರು ಮಹಿಳೆಯರು ಬೆಂಗಳೂರಿನ ಕೈಗಾರಿಕಾ ಮಹಾಸಂಸ್ಥೆ ಮುಂದೆ ಸರದಿ ಸಾಲಿನಲ್ಲಿ ನಿಂತಿರುವುದು.
ರಿಯಾಯಿತಿ ದರದಲ್ಲಿ ಮೈಸೂರು ಸಿಲ್ಕ್ ಸೀರೆ ನೀಡಲಾಗುತ್ತಿದೆ ಎಂಬ ಮಾಹಿತಿ ಮೇಲೆ ನೂರಾರು ಮಹಿಳೆಯರು ಬೆಂಗಳೂರಿನ ಕೈಗಾರಿಕಾ ಮಹಾಸಂಸ್ಥೆ ಮುಂದೆ ಸರದಿ ಸಾಲಿನಲ್ಲಿ ನಿಂತಿರುವುದು.   

ಬೆಂಗಳೂರು: ರಿಯಾಯಿತಿ ದರದಲ್ಲಿ ಸೀರೆ ನೀಡುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಪ್ರಕಟಿಸಿದ್ದ ಮೈಸೂರು ಸಿಲ್ಕ್ಸ್ ಸಂಸ್ಥೆ ಇದೀಗ ಲಾಟರಿ ಮೂಲಕ ಸೀರೆ ವಿತರಿಸಲು ಮುಂದಾಗಿದೆ.

ರಿಯಾಯಿತಿ ದರದಲ್ಲಿ ಸೀರೆ ಖರೀದಿಸಲುಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಇದರಿಂದಅವಾಕ್ಕಾದ ಅಧಿಕಾರಿಗಳು ಲಾಟರಿ ಮೂಲಕ ಆಯ್ಕೆ ಮಾಡಿ ಸೀರೆ ವಿತರಿಸುವುದಾಗಿ ಘೋಷಿಸಿದರು. ಅದರಂತೆ ಮಹಿಳೆಯರ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಸಂಗ್ರಹಿಸಲಾಗುತ್ತಿದೆ. ಮಹಿಳೆಯರಿಗೆ ಸರಣಿ ಸಂಖ್ಯೆ ನೀಡಲಾಗಿದೆ. ಹೆಸರು ನೋಂದಾಯಿಸಿಕೊಂಡ ಮಹಿಳೆಯರು ಸಂಸ್ಥೆಯ ಬಳಿಕಾಯುತ್ತಿದ್ದಾರೆ.

ಮೈಸೂರು, ದಾವಣಗೆರೆ, ಬೆಳಗಾವಿ, ಚನ್ನಪಟ್ಟಣ ಸೇರಿದಂತೆಕೆಎಸ್‌ಐಸಿಯ ರಾಜ್ಯದಲ್ಲಿನ 18ಬ್ರಾಂಚ್ ಗಳಲ್ಲಿಗೌರಿ ಹಬ್ಬದ ಪ್ರಯುಕ್ತ ರಿಯಾಯತಿ ದರದಲ್ಲಿಸೀರೆ ನೀಡಲಾಗುತ್ತಿದೆ.

ADVERTISEMENT

₹14 ಸಾವಿರ ಮೌಲ್ಯದ ಸೀರೆಯನ್ನು ₹4,500ಕ್ಕೆ ಮಾರಲಾಗುತ್ತದೆ. 1,500 ಸೀರೆಗಳು ಇಲ್ಲಿವೆ ಎಂದು ಕಂಪನಿಯ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಭಾನುಪ್ರಕಾಶ್ ತಿಳಿಸಿದರು.

ಮೈಸೂರಲ್ಲಿ ಪ್ರತಿಭಟನೆ

ಮೈಸೂರು ವರದಿ: ಕೆಎಸ್‌ಐಸಿ ರೇಷ್ಮೆ ಸೀರೆ ಖರೀದಿಗಾಗಿ ನೂಕು ನುಗ್ಗಲು ಉಂಟಾದ ಕಾರಣಲಾಟರಿ ಮೂಲಕ ಸೀರೆ ನೀಡಲಾಗುತ್ತದೆ ಎಂದು ತಿಳಿದಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು. ಮೃಗಾಲಯದ ಎದುರಿರುವ ಕೆಎಸ್ ಐಸಿ ಸಿಲ್ಕ್ ಮಳಿಗೆಯಲ್ಲಿ ಈ ಘಟನೆ ನಡೆದಿದೆ.

15ಸಾವಿರ ರೂ. ಸೀರೆಯನ್ನು ನಾಲ್ಕೂವರೆ ರೂ.ಗೆ ನೀಡಲಾಗುತ್ತಿದ್ದು, ಸೀರೆ ಕೊಳ್ಳಲು ಸಾರ್ವಜನಿಕರು ಮುಗಿಬಿದ್ದಿದ್ದಾರೆ. ಮಧ್ಯಾಹ್ನ 3ಗಂಟೆಯವರೆಗೆ ಆಧಾರ್ ನೋಂದಣಿ ಮಾಡಿಸಿಕೊಂಡು ಬಳಿಕ ಲಾಟರಿಯ ಮೂಲಕ ಸೀರೆ ವಿತರಿಸಲಾಗುತ್ತಿದೆ ಎಂದು ಸಂಸ್ಥೆಯ ಮ್ಯಾನೇಜರ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸೀರೆಗಾಗಿ‌ ಬಿಸಿಲಿನಲ್ಲಿ ನಿಂತಿರುವ ಮಹಿಳೆಯರು

ಮಳಿಗೆಯ ಎದುರು ಭಾರೀ ಸಂಖ್ಯೆಯಲ್ಲಿ ಸೀರೆ ಖರೀದಿಗಾಗಿ ಮಹಿಳೆಯರು ಜಮಾಯಿಸಿದ್ದು, ನಾವು ಬೆಳಿಗಿನ ಜಾವದಿಂದಲೇ ಇಲ್ಲಿಗೆ ಬಂದು ಕುಳಿತಿದ್ದೇವೆ. ನೀವು ಆಧಾರ್ ಸಂಖ್ಯೆ ನೋಂದಣಿ ಮಾಡಿಕೊಂಡು ಲಾಟರಿ ಮೂಲಕ ಅಯ್ಕೆ ಮಾಡಿ ಸೀರೆ ನೀಡಿದರೆ ನಮಗೆ ಅನ್ಯಾಯವಾಗಲಿದೆ. ಬೆಳಿಗ್ಗೆಯಿಂದಲೇ ಬಂದು ಕಾದು ಕುಳಿತವರಿಗೆ ಬೆಲೆಯಿಲ್ಲವೇ ಎಂದು ಮಹಿಳೆಯರು ಮ್ಯಾನೇಜರ್ ಅವರನ್ನೇ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಷ್ಟೇ ಅಲ್ಲದೇ ಸರ್ಕಾರದ ವಿರುದ್ಧ, ಮಳಿಗೆಯ ಮ್ಯಾನೇಜರ್ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಮುನ್ನ ಸ್ಥಳಕ್ಕಾಗಮಿಸಿದ ದೇವರಾಜ ಠಾಣೆಯ ಎಸಿಪಿ ಗಜೇಂದ್ರ ಪ್ರಸಾದ್, ನಜರ್‌ಬಾದ್ ಠಾಣೆಯ ಇನ್ಸಪೆಕ್ಟರ್ ಶೇಖರ್ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಮ್ಯಾನೇಜರ್ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ್ದಾರೆ.

ಮ್ಯಾನೇಜರ್ ಕೃಷ್ಣ ಮಾತನಾಡಿ, ‘ನಮಗೆ ಸರ್ಕಾರದಿಂದ ಲಾಟರಿ ಮೂಲಕ ಆಯ್ಕೆ ಮಾಡಿ ಎಂದು ಆದೇಶ ಬಂದಿದೆ. ನಾವು ಅದರಂತೆ ನಡೆದುಕೊಳ್ಳುತ್ತಿದ್ದೇವೆ. ನಾವು ಹೇಳುವುದನ್ನುಸಾರ್ವಜನಿಕರು ಅರ್ಥಮಾಡಿಕೊಳ್ಳುತ್ತಿಲ್ಲ’ ಎಂದು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಆಧಾರ್‌ ಅನ್ನು ಮಹಿಳೆಯರೇ ನೀಡಬೇಕು. ಅವರೇ ಸೀರೆ ಕೊಂಡೊಯ್ಯಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.