ADVERTISEMENT

ಡಿಕೆಶಿಗೆ ಸಿಕ್ಕಿದ್ದು ಮಂಡಕ್ಕಿ ಮೂಟೆ: ಬಿಜೆಪಿ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2021, 20:13 IST
Last Updated 16 ಏಪ್ರಿಲ್ 2021, 20:13 IST
ಎನ್‌. ರವಿಕುಮಾರ್‌
ಎನ್‌. ರವಿಕುಮಾರ್‌   

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಮಸ್ಕಿಯಲ್ಲಿ ಹಿಡಿದ ಎರಡು ಮೂಟೆಗಳಲ್ಲಿ ಸಿಕ್ಕಿದ್ದು ಮಂಡಕ್ಕಿಯೇ ಹೊರತು ಹಣವಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನಕಾರ್ಯದರ್ಶಿ ಎನ್‌.ರವಿಕುಮಾರ್‌ ಹೇಳಿದ್ದಾರೆ.

ಈ ಕುರಿತು ವಿಡಿಯೊ ಒಂದನ್ನು ಬಿಡುಗಡೆ ಮಾಡಿರುವ ಅವರು, ಬಿಜೆಪಿ ಮತದಾರರಿಗೆ ಹಣ ಹಂಚುತ್ತಿದೆ ಎಂದು ಸುಳ್ಳು ಪ್ರಚಾರ ನಡೆಸಿರುವ ಶಿವಕುಮಾರ್‌ ಅವರು ಯಡಿಯೂರಪ್ಪ ಮತ್ತು ನಳಿನ್ ಕುಮಾರ್‌ ಕಟೀಲ್‌ ಅವರಲ್ಲಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ಬಿಜೆಪಿಯವರು ಎರಡು ಚೀಲಗಳಲ್ಲಿ ಹಣ ಇಟ್ಟಿದ್ದರು ಎನ್ನಲಾದ ನಿಗದಿತ ಸ್ಥಳಕ್ಕೆ ಪೊಲೀಸರು ತೆರಳಿ ಆ ಚೀಲಗಳನ್ನು ಪರಿಶೀಲಿಸಿದಾಗ ಅದರಲ್ಲಿ ಮಂಡಕ್ಕಿ ಮಾತ್ರ ಇತ್ತು. ಒಂದು ಪೈಸೆಯೂ ಸಿಕ್ಕಿಲ್ಲ ಎಂದು ರವಿಕುಮಾರ್‌ ಸ್ಪಷ್ಟಪಡಿಸಿದರು.

ADVERTISEMENT

ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡಿ ಡಿ.ಕೆ.ಶಿವಕುಮಾರ್‌ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.