ಬೆಂಗಳೂರು:ಈಗಾಗಲೇ ವಿವಿಧ ನಿಗಮ, ಮಂಡಳಿ, ಅಕಾಡೆಮಿಗಳ ನಾಮನಿರ್ದೇಶನಗಳನ್ನು ರದ್ದು ಮಾಡಿರುವ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ, ಈಗ ನಗರ ಸ್ಥಳೀಯ ಸಂಸ್ಥೆಗಳ ನಾಮ ನಿರ್ದೇಶಿತ ಸದಸ್ಯರ ನೇಮಕಾತಿಯನ್ನು ರದ್ದು ಮಾಡಿದೆ.
ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಿಗೆ ಹಿಂದಿನ ಸರ್ಕಾರ ನೇಮಕ ಮಾಡಿದ್ದ ನಾಮ ನಿರ್ದೇಶಿತ ಸದಸ್ಯರ ನೇಮಕಾತಿಯನ್ನು ರದ್ದುಪಡಿಸಿ ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.