ADVERTISEMENT

ಜನಾರ್ದನ ರೆಡ್ಡಿಗೆ ಕುಣಿಕೆ ಬಿಗಿಗೊಳಿಸಲು ಚಂದ್ರಬಾಬು ನಾಯ್ಡು ಒತ್ತಡ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2018, 20:18 IST
Last Updated 8 ನವೆಂಬರ್ 2018, 20:18 IST
   

ಬೆಂಗಳೂರು:₹ 20 ಕೋಟಿ ಡೀಲ್‌ ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಪ್ರಕರಣವನ್ನು ಬಿಗಿಗೊಳಿಸುವಂತೆ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ರಾಜ್ಯದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗೆ ಮನವಿ ಮಾಡಿದ್ದಾರೆ.

ಕುಮಾರಸ್ವಾಮಿ ಅವರ ಜತೆಗಿನ ಮಾತುಕತೆ ಸಂದರ್ಭದಲ್ಲಿ ನಾಯ್ಡು ಈ ವಿಷಯ ಪ್ರಸ್ತಾಪಿಸಿದರು ಎಂದು ಮೂಲಗಳು ತಿಳಿಸಿವೆ.

‘ಇಲ್ಲಿ ಜನಾರ್ದನ ರೆಡ್ಡಿಯನ್ನು ಬಿಗಿ ಮಾಡಿದರೆ ಆಂಧ್ರದಲ್ಲಿ ವೈಆರ್‌ಎಸ್‌ ಕಾಂಗ್ರೆಸ್‌ನ ಜಗನ್‌ಮೋಹನ್ ರೆಡ್ಡಿ ಕಟ್ಟಿ ಹಾಕಬಹುದು. ರೆಡ್ಡಿ ಮತ್ತು ಜಗನ್‌ ಒಳ ವ್ಯವಹಾರಗಳನ್ನೂ ಮಟ್ಟ ಹಾಕಬಹುದು’ ಎಂದು ಹೇಳಿದರೆಂದು ಮೂಲಗಳು ತಿಳಿಸಿವೆ.

ADVERTISEMENT

ಈ ಕುರಿತು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಕುಮಾರಸ್ವಾಮಿ, ‘ರೆಡ್ಡಿ ವಿರುದ್ಧ ರಾಜಕೀಯ ದ್ವೇಷ ತೀರಿಸಿಕೊಳ್ಳುತ್ತಿಲ್ಲ.ವಂಚನೆ ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸಲಾಗಿದ್ದು, ಪೊಲೀಸರಿಗೆ ತನಿಖೆಯ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದೇನೆ. ತನಿಖೆಯ ಯಾವ ಹಂತದಲ್ಲೂ ಹಸ್ತಕ್ಷೇಪ ಮಾಡುವುದಿಲ್ಲ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.