ಮಂಗಳೂರು: ‘ನಳಿನ್ಕುಮಾರ್ ಕಟೀಲ್ ವಿದ್ಯಾರ್ಥಿ ಜೀವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು. ಈಗ ಮರಳಿ ಪಕ್ಷಕ್ಕೆ ಬರುವುದಾದರೆ ಸ್ವಾಗತ ಕೋರುತ್ತೇನೆ’ ಎಂದು ಶಾಸಕ ಯು. ಟಿ. ಖಾದರ್ ಹೇಳಿದರು.
‘ಯು.ಟಿ. ಖಾದರ್ ಮತ್ತು ರಮಾನಾಥ್ ರೈ ಹೊರತುಪಡಿಸಿ ಉಳಿದ ಕಾಂಗ್ರೆಸ್ ಮುಖಂಡರನ್ನು ಬಿಜೆಪಿಗೆ ಕರೆ ತನ್ನಿ’ ಎಂಬ ನಳಿನ್ಕುಮಾರ್ ಕಟೀಲ್ ಹೇಳಿಕೆ ತಿರುಗೇಟು ನೀಡಿದ ಅವರು, ‘ಕಾಂಗ್ರೆಸ್ ಕಾರ್ಯಕರ್ತರು ಒಳ್ಳೆಯವರು, ಹಾಗಾಗಿ ಒಳ್ಳೆಯವರನ್ನು ಪಕ್ಷಕ್ಕೆ ಸೇರಿಸಲು ನಳಿನ್ಕುಮಾರ್ ಕಟೀಲ್ ಹೇಳಿರಬಹುದು’ ಎಂದರು.
‘ನಳಿನ್ಕುಮಾರ್ ವಿದ್ಯಾರ್ಥಿ ಜೀವನದಲ್ಲಿದ್ದಾಗ, ಆಗ ಎನ್ಎಸ್ಯುಐನಲ್ಲಿದ್ದ ಕಾಂಗ್ರೆಸ್ನ ವಿನಯ್ ಕುಮಾರ್ ಸೊರಕೆ ಪರ ದುಡಿದಿದ್ದರು. ಕಾಂಗ್ರೆಸ್ ಕಾರ್ಯಕರ್ತನಾಗಿ ನಳಿನ್ ಕೆಲಸ ಮಾಡುತ್ತಿದ್ದರು. ನಳಿನ್ಗೆ ಈಗ ಹಿಂದಿನ ಕೆಲಸ ನೆನಪಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರ ಬದ್ಧತೆ ಹಾಗೂ ಶಕ್ತಿ ನಳಿನ್ಗೆ ಗೊತ್ತಿದೆ. ಹಾಗಾಗಿ ನಳಿನ್ಕುಮಾರ್ ಮತ್ತೆ ಪಕ್ಷಕ್ಕೆ ಬರುವುದಾದರೆ ಸ್ವಾಗತ ಕೋರುತ್ತೇನೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.